ಕಾಂಗ್ರೆಸ್ ಹಿರಿಯ ನಾಯಕ ನಿಧನ: ಕಳಚಿದ ಮಧ್ಯೆ ಕರ್ನಾಟಕದ ಕೈ ಕೊಂಡಿ..!

By Suvarna NewsFirst Published Oct 27, 2020, 2:08 PM IST
Highlights

ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ವಿಧಿವಶರಾಗಿದ್ದು, ಅವರಿಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ದಾವಣಗೆರೆ, (ಅ.27): ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಡಾ.ವೈ.ನಾಗಪ್ಪ (87)  ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೂ ಆಗಿದ್ದ ನಾಗಪ್ಪ ಅವರು ಇಂದು (ಮಂಗಳವಾರ) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಧರಂ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ನಾಗಪ್ಪ ಅವರು ಹರಿಹರ ವಿಧಾನ ಸಭಾ ಕ್ಷೇತ್ರದಿಂದ 1989, 1999 ಹಾಗೂ 2004 ರಲ್ಲಿ ಶಾಸಕರಾಗಿ  ಆಯ್ಕೆಯಾಗಿದ್ದರು. 

ಕರ್ನಾಟಕದ MLC ಪುತ್ರ ಹಠಾತ್ ನಿಧನ, ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ

2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2008 ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಡಾ. ವೈ ನಾಗಪ್ಪ ಪರಾಭವಗೊಂಡಿದ್ದರು. ನಂತರ ಬದಲಾದ ರಾಜಕೀಯದಿಂದ ಮತ್ತು ಅನಾರೋಗ್ಯದಿಂದ  ರಾಜಕಾರಣದಿಂದ ದೂರ ಉಳಿದಿದ್ದರು.

1980 ರಲ್ಲಿ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪದೇ ಪದೇ ವರ್ಗಾವಣೆ ಮಾಡಿಸಿದಾಗ ಬೇಸತ್ತು ಶಾಸಕರಿಗೆ ಸೆಡ್ಡು ಹೊಡೆದು ರಾಜಕೀಯ ಪ್ರವೇಶಿಸಿದ್ದರು. 

ಮೃತರು ಒಬ್ಬ ಪುತ್ರ, ಮೂವರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಹರಿಹರದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗಣ್ಯರ ಸಂತಾಪ
 

ಮಾಜಿ ಸಚಿವ ಡಾ.ವೈ.ನಾಗಪ್ಪ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು.
80-90ರ ದಶಕದಲ್ಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಡಾ.ನಾಗಪ್ಪ ಸದಾ ಬಡವರು ಮತ್ತು ಶೋಷಿತರ ಪರವಾಗಿದ್ದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/heJAN6PeiF

— Siddaramaiah (@siddaramaiah)

ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಚಿವರಾದ ಡಾ! ವೈ.ನಾಗಪ್ಪ ವಿಧಿವಶರಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಹರಿಹರ ಕ್ಷೇತ್ರದಿಂದ ಮೂರು ಬಾರಿ

ಶಾಸಕರಾಗಿದ್ದ ವೈ.ನಾಗಪ್ಪ, ಧರ್ಮಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು.
ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/3VNX9Abagb

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)

ಮಾಜಿ ಸಚಿವರಾಗಿದ್ದ ಮತ್ತು ಶಾಸಕರಾಗಿ ಸೇವೆ ಸಲ್ಲಿಸಿದ್ದ ಡಾ.ವೈ.ನಾಗಪ್ಪ ಅವರ ನಿಧನ ತುಂಬಾ ದುಃಖ ತಂದಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಮತ್ತು ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/KPTRa5iu7H

— K S Eshwarappa (@ikseshwarappa)
click me!