Breaking: ರಾಜ್ಯಸಭಾ ಚುನಾವಣೆಗೆ ಕರ್ನಾಟಕದ ಸ್ಪರ್ಧಿಗಳ ಲಿಸ್ಟ್‌ ರಿಲೀಸ್‌!

Published : Feb 14, 2024, 04:08 PM ISTUpdated : Feb 14, 2024, 04:26 PM IST
Breaking: ರಾಜ್ಯಸಭಾ ಚುನಾವಣೆಗೆ ಕರ್ನಾಟಕದ ಸ್ಪರ್ಧಿಗಳ ಲಿಸ್ಟ್‌ ರಿಲೀಸ್‌!

ಸಾರಾಂಶ

ರಾಜ್ಯಸಭೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಒಟ್ಟು ಮೂರು ಅಭ್ಯರ್ಥಿಗಳ ಹೆಸರನ್ನು ರಾಜ್ಯ ಕಾಂಗ್ರೆಸ್‌ ಪ್ರಕಟಿಸಿದೆ.

ಬೆಂಗಳೂರು (ಫೆ.14): ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಕಾಂಗ್ರೆಸ್‌ ಪ್ರಕಟಿಸಿದೆ. ಅಜಯ್‌ ಮಾಕೆನ್‌, ಜಿಸಿ ಚಂದ್ರಶೇಖರ್‌ ಹಾಗೂ ಸಯ್ಯದ್‌ ನಾಸಿರ್‌ ಹುಸೇನ್‌ಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.  ದೆಹಲಿ ಕಾಂಗ್ರೆಸ್‌ನ ನಾಯಕರಾಗಿರುವ ಅಜಯ್‌ ಮಾಕೇನ್‌ಗೆ ಈ ಬಾರಿ ಹೊಸದಾಗಿ ಅವಕಾಶ ನೀಡಲಾಗಿದೆ. ಇನ್ನು ಜಿಸಿ ಚಂದ್ರಶೇಖರ್‌ ಹಾಗೂ ಸಯ್ಯದ್‌ ನಾಸಿರ್‌ ಹುಸೇನ್‌ಗೆ ಮರು ಆಯ್ಕೆಗೆ ಅವಕಾಶ ನೀಡಲಾಗಿದೆ. ಎಲ್‌.ಹನುಮಂತಯ್ಯ ಅವರಿಗೆ ಇದ್ದ ಟಿಕೆಟ್‌ಅನ್ನು ಅಜಯ್‌ ಮಾಕೆನ್‌ಗೆ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆಯ ದಿನವಾಗಿದ್ದು, ಅದಕ್ಕೂ ಒಂದು ದಿನ ಮುನ್ನ ಕಾಂಗ್ರೆಸ್‌ ಕರ್ನಾಟಕದ ಅಭ್ಯರ್ಥಿಗಳ ಲಿಸ್ಟ್‌ ಪ್ರಕಟಿಸಿದೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು,  ರಾಜ್ಯದ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಪಕ್ಷ ಫೈನಲ್‌ ಮಾಡಿದೆ. ಮುಖ್ಯವಾಗಿ ಜಿಸಿ ಚಂದ್ರಶೇಖರ್‌ ಹಾಗೂ ನಾಸಿರ್‌ ಹುಸೇನ್‌ಗೆ ಮತ್ತೊಮ್ಮೆ ಅವಕಾಶವನ್ನು ಕೇಂದ್ರ ನಾಯಕತ್ವ ನೀಡಿದೆ. ಇದು ನಾಸಿರ್‌ ಹಾಗೂ ಚಂದ್ರಶೇಖರ್‌ ಅವರಿಗೆ 2ನೇ ಅವಧಿಯಾಗಿದೆ. ಇನ್ನು ಅಜಯ್‌ ಮಾಕೆನ್‌ ಅವರ ಹೆಸರನ್ನು ಎಲ್‌.ಹನುಮಂತಯ್ಯ ಅವರ ಬದಲು ಫೈನಲ್‌ ಮಾಡಲಾಗಿದೆ. ಮನಮೋಹನ್‌ ಸಿಂಗ್‌ ಅವರ ಪ್ರಧಾನಮಂತ್ರಿ ಅವಧಿಯಲ್ಲಿ ಅಜಯ್‌ ಮಾಕೆನ್‌ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದರು. ಅದಲ್ಲದೆ, ಇಂದಿಗೂ ದೆಹಲಿ ಕಾಂಗ್ರೆಸ್‌ನಲ್ಲಿ ತಮ್ಮದೇ ಆದ ಪ್ರಭಾವವನ್ನು ಅವರು ಉಳಿಸಿಕೊಂಡಿದ್ದಾರೆ. ಅದಲ್ಲದೆ, ಅವರು ಮೂರು ಬಾರಿ ಶಾಸಕರಾಗಿಯೂ ಕೆಲಸ ಮಾಡಿದ್ದಾರೆ.

ದೆಹಲಿ ಕಾಂಗ್ರೆಸ್‌ನಲ್ಲಿ ಪ್ರಭಾವಿ ನಾಯಕರಾಗಿರುವ ಅವರಿಗೆ ಕರ್ನಾಟಕದಿಂದ ಟಿಕೆಟ್ ನೀಡುವ ನಿರ್ಧಾರವನ್ನು ಮಾಡಲಾಗಿದೆ. ಆ ಮೂಲಕ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರಾಗಿ ಅಜಯ್ ಮಾಕೇನ್‌ ಆಯ್ಕೆಯಾಗಲಿದ್ದಾರೆ. ಇನ್ನು ರಾಜ್ಯ ಕಾಂಗ್ರೆಸ್‌ ಪಾಲಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್‌ ಮಾಡುವುದು ಕೂಡ ಅಷ್ಟು ಸುಲಭವಾಗಿರಲಿಲ್ಲ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಬಣಗಳು ತಮ್ಮದೇ ಆದ ಕೆಲವೊಂದು ಹೆಸರುಗಳನ್ನು ಹೊಂದಿದ್ದವು. ಅದಕ್ಕೆ ದೊಡ್ಡ ಪ್ರಮಾಣದ ಲಾಬಿ ಕೂಡ ಮಾಡಲಾಗಿತ್ತು. ಅಂತಿಮವಾಗಿ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಅತ್ಯಂತ ಆಪ್ತರಾಗಿರುವ ನಾಸಿರ್‌ ಹುಸೇನ್‌ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಲೋಕಸಭೆ ಕದನದಿಂದ ಅಧಿಕೃತವಾಗಿ ಹಿಂದೆ ಸರಿದ ಸೋನಿಯಾ, ರಾಜಸ್ಥಾನದಿಂದ ರಾಜ್ಯಸಭೆಗೆ ಫೈಟ್‌!

ಇನ್ನು ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಜಿಸಿ ಚಂದ್ರಶೇಖರ್‌ ಅವರಿಗೆ ಟಿಕೆಟ್‌ ಪಡೆದುಕೊಳ್ಳುವ ಮೂಲಕ ಡಿಕೆ ಶಿವಕುಮಾರ್‌ ಅವರ ಬಣದ ಕೈ ಮೇಲಾಗಿದೆ ಎನ್ನುವುದು ಗೋಚರವಾಗಿದೆ. ಅಜಯ್‌ ಮಾಕೆನ್‌ ಅವರನ್ನು ಎಐಸಿಸಿಯೇ ನಿರ್ಧಾರ ಮಾಡಿತ್ತು. ಈ ಮೊದಲು ಅಜಯ್‌ ಮಾಕೆನ್‌ ಅವರ ಹೆಸರು ಹಿಮಾಚಲ ವಿಧಾನಸಭೆಯಿಂದ ಕೇಳಿ ಬಂದಿತ್ತು. ಕೊನೆಗೆ ಅಭಿಷೇಕ್‌ ಮನು ಸಿಂಗ್ವಿಗೆ ಹಿಮಾಚಲ ಪ್ರದೇಶದಿಂದ ರಾಜ್ಯಸಭೆ ಟಿಕೆಟ್‌ ನೀಡಲಾಗಿದ್ದರೆ, ಕರ್ನಾಟಕದಿಂದ ಮಾಕೆನ್‌ಗೆ ಅವಕಾಶ ನೀಡಲಾಗಿದೆ.

ಬಿಜೆಪಿ ಸೇರಿದ ಕಾಂಗ್ರೆಸ್ ಮಾಜಿ ಸಿಎಂ ಅಶೋಕ್ ಚವಾಣ್, ನಾಳೆ ಕೇಸರಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ