ಪ್ರಿಯಾಂಕ್‌ ಖರ್ಗೆ ಸೀಕ್ರೆಟ್‌ ಸಂದೇಶ ಕುತೂಹಲ.. ರಾಹುಲ್‌ ಗಾಂಧಿ ಜತೆ ಚರ್ಚಿಸಿ ರಾಜ್ಯಕ್ಕೆ!

Published : Nov 26, 2025, 04:45 AM IST
Priyank Kharge

ಸಾರಾಂಶ

ಅಧಿಕಾರ ಹಸ್ತಾಂತರ ಬಿಕ್ಕಟ್ಟಿನ ನಡುವೆಯೇ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ರಾಜ್ಯ ನಾಯಕರಿಗಾಗಿ ಸಂದೇಶವೊಂದನ್ನು ಹೊತ್ತು ತಂದಿದ್ದರು ಎನ್ನಲಾಗಿದೆ.

ಬೆಂಗಳೂರು (ನ.26): ಅಧಿಕಾರ ಹಸ್ತಾಂತರ ಬಿಕ್ಕಟ್ಟಿನ ನಡುವೆಯೇ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ರಾಜ್ಯ ನಾಯಕರಿಗಾಗಿ ಸಂದೇಶವೊಂದನ್ನು ಹೊತ್ತು ತಂದಿದ್ದರು ಎನ್ನಲಾಗಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿದೇಶದಿಂದ ಹಿಂತಿರುಗಿದ ಪ್ರಿಯಾಂಕ್‌ ಖರ್ಗೆ ಅವರು ಮಂಗಳವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು.

ಇದಾದ ನಂತರ ನಗರಕ್ಕೆ ಆಗಮಿಸಿದ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಾಹುಲ್ ನೀಡಿದ್ದ ಸಂದೇಶವೊಂದನ್ನು ಗೌಪ್ಯವಾಗಿ ಉಭಯ ನಾಯಕರಿಗೂ ರವಾನಿಸಿದರು ಎನ್ನಲಾಗಿದೆ. ಮೂಲಗಳ ಪ್ರಕಾರ, 2023ರ ಮೇ 18ರಂದು ದೆಹಲಿಯಲ್ಲಿ ಆರು ಮಂದಿ ನಾಯಕರ ಸಭೆಯಲ್ಲಿ ಕೈಗೊಂಡಿದ್ದ ತೀರ್ಮಾನ ಪಾಲನೆಯಾಗಬೇಕು ಎಂಬುದು ಈ ಸಂದೇಶ ಎನ್ನಲಾಗುತ್ತಿದೆ.

ಆದರೆ, ಮೇ 18ರಂದು ನಡೆದ ಸಭೆಯ ನಡಾವಳಿಯ ಬಗ್ಗೆ ಉಭಯ ಬಣಗಳು ವಿಭಿನ್ನ ವಿವರಣೆ ನೀಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಪ್ರಕಾರ, ಸದರಿ ಸಭೆಯಲ್ಲಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆಯಾಗಿಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಣದ ಪ್ರಕಾರ, ತಲಾ ಎರಡೂವರೆ ವರ್ಷ ಅಧಿಕಾರದ ನಿರ್ಧಾರ ಸದರಿ ಸಭೆಯಲ್ಲಿ ಆಗಿತ್ತು.

ಉಭಯ ಬಣಗಳಲ್ಲೂ ತೀವ್ರ ಚಟುವಟಿಕೆ

ಪ್ರಿಯಾಂಕ್‌ ಖರ್ಗೆ ಅವರು ದೆಹಲಿಯಿಂದ ತಂದ ಸಂದೇಶ ರವಾನೆಯಾದ ನಂತರ ಉಭಯ ಬಣಗಳಲ್ಲೂ ತೀವ್ರ ಚಟುವಟಿಕೆ ನಡೆಯಿತು. ಮುಖ್ಯವಾಗಿ ಸಿದ್ದರಾಮಯ್ಯ ಆಪ್ತ ಸಚಿವ ಜಮೀರ್ ಅಹ್ಮದ್‌ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಅನಂತರ ಅವರು ಮುಖ್ಯಮಂತ್ರಿಯವರೊಂದಿಗೂ ಚರ್ಚಿಸಿದರು. ಆದರೆ, ಯಾವ ವಿಚಾರ ಚರ್ಚೆ ನಡೆಸಿದರು ಎಂಬುದು ಬಹಿರಂಗಗೊಂಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

17 ವರ್ಷಗಳ ಬಳಿಕ ತಾರಿಕ್ ರೆಹಮಾನ್ ಬಾಂಗ್ಲಾಕ್ಕೆ ಎಂಟ್ರಿ; ಭುಗಿಲೆದ್ದ ರಾಜಕೀಯ ಸಂಘರ್ಷ, ಯೂನಸ್ ಸರ್ಕಾರಕ್ಕೆ ಭಾರೀ ಹಿನ್ನಡೆ
ಅಧಿಕಾರ ಶಾಶ್ವತವಲ್ಲ: ಸಿಎಂ ಬದಲಾವಣೆ ಬಗ್ಗೆ ಮೌನ ಮುರಿದ ಯತೀಂದ್ರ ! ಡಿಕೆಶಿ ಹೇಳಿಕೆಗೆ ನೀಡಿದ ಉತ್ತರವೇನು?