
ಬೆಂಗಳೂರು, (ಫೆ.05): ಫೆಬ್ರವರಿ 6 ರಿಂದ ಅಧಿವೇಶನ ಮುಗಿಯುವವರೆಗೂ ಕಡ್ಡಾಯವಾಗಿ ಸದನಕ್ಕೆ ಹಾಜರಾಗುವಂತೆ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರಿಗೂ ಕಾಂಗ್ರೆಸ್ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ವಿಪ್ ಜಾರಿ ಮಾಡಿದ್ದಾರೆ.
ನಾಳೆಯಿಂದ (ಬುಧವಾರ) ಸದನದಲ್ಲಿ ಅಧಿವೇಶನ ನಡೆಯಲಿದೆ. ಮೈತ್ರಿ ಸರ್ಕಾರದಲ್ಲಿರುವ ಅತೃಪ್ತ ಶಾಸಕರನ್ನು ಬಳಸಿಕೊಂಡು ಸದನದಲ್ಲಿ ಅವಿಶ್ವಾಸ ಮಂಡನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ಬಜೆಟ್ ಅಧಿವೇಶನಕ್ಕೆ ಬಾರದಿದ್ದರೆ ಜೋಕೆ, 'ಕೈ' ಮಾಸ್ಟರ್ ಸ್ಟ್ರೋಕ್
ಈ ಹಿನ್ನೆಲೆಯಲ್ಲಿ ಅಧಿವೇಶನ ಮುಗಿಯುವವರೆಗೂ ಕಡ್ಡಾಯವಾಗಿ ಸದನಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದ್ದು, ಅಷ್ಟೇ ಅಲ್ಲದೇ ಪತ್ರದ ಜೊತೆಗೆ ಇ ಮೇಲ್, ವಾಟ್ಸ್ ಆ್ಯಪ್ ಮೂಲಕ ವಿಪ್ ಜಾರಿ ಸಂದೇಶ ರವಾನಿಸಲು ಕಾಂಗ್ರೆಸ್ ನಿರ್ಧರಿಸಿದೆ.
HDK ಬಜೆಟ್ ಮಂಡನೆ ಡೌಟ್ ಎಂದ BJP, ಅಲರ್ಟ್ ಆದ ಮೈತ್ರಿ ಸರ್ಕಾರ
ಫೆ. 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ.
ಒಂದು ವೇಳೆ ಬಜೆಟ್ ಅಧಿವೇಶನಕ್ಕೆ ಗೈರಾಗುವ ಶಾಸಕರ ಮೇಲೆ ಪಕ್ಷಾಂತರ ಕಾಯ್ದೆ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.