Council Election Result : ಕುತೂಹಲದ ಕ್ಷೇತ್ರ ಬೆಂಗಳೂರಲ್ಲಿ ಬಿಜೆಪಿಗೆ ಜಯ : ಕೆಜಿಎಫ್ ಬಾಬು ಸೋಲು

Suvarna News   | Asianet News
Published : Dec 14, 2021, 11:44 AM ISTUpdated : Dec 14, 2021, 12:19 PM IST
Council Election Result : ಕುತೂಹಲದ ಕ್ಷೇತ್ರ ಬೆಂಗಳೂರಲ್ಲಿ ಬಿಜೆಪಿಗೆ ಜಯ : ಕೆಜಿಎಫ್ ಬಾಬು ಸೋಲು

ಸಾರಾಂಶ

ಬೆಂಗಳೂರು ನಗರ ಕ್ಷೇತ್ರದಿಂದ ಬಿಜೆಪಿ (BJP) ಅಭ್ಯರ್ಥಿಯಾಗಿ  ಕಣಕ್ಕೆ ಇಳಿದಿದ್ದ ಎಚ್‌.ಎಸ್‌.ಗೋಪಿನಾಥ್‌ ಬಿಜೆಪಿ ಅಭ್ಯರ್ಥಿ ಎಚ್‌.ಎಸ್‌.ಗೋಪಿನಾಥ್‌  ಐತಿಹಾಸಿಕ ಗೆಲುವು ಸಾಧಿಸಿದ್ದಾರೆ

ಬೆಂಗಳೂರು (ಡಿ.14): ಬೆಂಗಳೂರು ನಗರ ಕ್ಷೇತ್ರದಿಂದ ಬಿಜೆಪಿ (BJP) ಅಭ್ಯರ್ಥಿಯಾಗಿ  ಕಣಕ್ಕೆ ಇಳಿದಿದ್ದ ಎಚ್‌.ಎಸ್‌.ಗೋಪಿನಾಥ್‌  ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.  ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಸಾವಿರಾರು ಕೋಟಿ ಒಡೆಯ ಯೂಸುಫ್‌ ಷರೀಫ್‌ (Yusuf Sharif - KGF babu ) ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ(Shinappa) ಅವರನ್ನು ಪರಾಭವಗೊಳಿಸುವ ಮೂಲಕ ವಿಜಯ ಮಾಲೆ ಧರಿಸಿದ್ದಾರೆ. 

ತೀವ್ರ ಕುತೂಹಲ ಮೂಡಿಸಿದ್ದ ಕ್ಷೇತ್ರದಲ್ಲಿ ಇದೀಗ ಟಪ್ ಫೈಟ್ ನಡುವೆ ಬಿಜೆಪಿ ಅಭ್ಯರ್ಥಿ  ಗೋಪಿನಾಥ ರೆಡ್ಡಿ ಗೆಲುವು ಪಡೆದಿದ್ದಾರೆ. ಈ ಮೂಲಕ ಬಿಜೆಪಿ 11 ಕ್ಷೇತ್ರಗಳಲ್ಲಿ ಗೆಲುವನ್ನು ಪಡೆದಂತಾಗಿದೆ. ಗೆಲ್ಲುವ ಅತೀವ ನಿರೀಕ್ಷೆಯಲ್ಲಿದ್ದ ಕೆಜಿಎಫ್ ಬಾಬು ಪರಾಭವಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋಪಿನಾಥರೆಡ್ಡಿ ಅವರ 1227ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕೋಟಿ ಒಡೆಯ ಯೂಸುಫ್ ಷರೀಫ್ ( ಕೆಜಿಎಫ್ ಬಾಬು) 830 ಮತಗಳನ್ನು ಪಡೆದುಕೊಂಡಿದ್ದಾರೆ. 

ಪ್ರತಿಪಕ್ಷ ಕಾಂಗ್ರೆಸ್‌ನ (Congress) ಹಿಡಿತದಲ್ಲಿರುವ ಬೆಂಗಳೂರು ನಗರ(Bengaluru City) ಸ್ಥಳೀಯ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿದ್ದ ಆಡಳಿತಾರೂಢ ಬಿಜೆಪಿ(BJP) ಅಭಿವೃದ್ಧಿ, ಸಂಘಟನೆಯ ಅಸ್ತ್ರವನ್ನಿಟ್ಟುಕೊಂಡು ರಾಜಕೀಯ (Politics) ತಂತ್ರಗಾರಿಕೆ ಮಾಡಿದೆ. ಕ್ಷೇತ್ರದಲ್ಲಿ ಜೆಡಿಎಸ್‌ (JDS) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್‌ (Congress) ನಡುವೆ ನೇರಾನೇರ ಪೈಪೋಟಿ ಏರ್ಪಟ್ಟಿತ್ತು. 

ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಇದು ಕಾಂಗ್ರೆಸ್‌ನ (Congress) ಭದ್ರಕೋಟೆ. ಒಂದೆರಡು ಬಾರಿ ಬಿಜೆಪಿ (BJP) ಪೈಪೋಟಿ ನೀಡಿದರೂ ಕ್ಷೇತ್ರವನ್ನು ‘ಕೈ’ ಮುಷ್ಟಿಯಿಂದ ವಶಕ್ಕೆ ಪಡೆದುಕೊಳ್ಳುವಲ್ಲಿ ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್‌ನ ಹಿಡಿತದಲ್ಲಿರುವ ಬೆಂಗಳೂರು (Bengaluru) ನಗರ ಸ್ಥಳೀಯ ಸಂಸ್ಥೆಗೆ ಲಗ್ಗೆ ಇಡಲು ಇನ್ನಿಲ್ಲದ ಕಸರತ್ತು ನಡೆಸಿತ್ತು. ಈ ಬಾರಿಯ ಚುನಾವಣೆಯು (Election) ಸಂಘಟನೆ, ಅಭಿವೃದ್ಧಿ, ಆರ್ಥಿಕ ಬಲದ ಮೇಲೆ ಮತದಾರರನ್ನು ಸೆಳೆಯುವ ಪ್ರಯತ್ನ ನಡೆದಿತ್ತು. ಆಡಳಿತದಲ್ಲಿರುವ ಕಾರಣ ಬಿಜೆಪಿ(BJP), ಅಭಿವೃದ್ಧಿ ಮತ್ತು ಸಂಘಟನೆಯ ಮೇಲೆ ವಿಶ್ವಾಸವಿಟ್ಟುಕೊಂಡರೆ, ಕಾಂಗ್ರೆಸ್‌ ಪಕ್ಷವು ತನ್ನ ಅಭ್ಯರ್ಥಿಯ ಆರ್ಥಿಕ ಬಲ ಮತ್ತು ಮೂಲ ಮತಗಳ ಮೇಲೆ ನಂಬಿಕೆ ಇಟ್ಟಿಕೊಂಡು ಪ್ರಚಾರ ಮಾಡಿತ್ತು. ಆದರೆ ಸಾವಿರ ಕೋಟಿ ಒಡೆಯ ಬಾಬು ಸೋಲಾಗಿದೆ. 

ನೇರ ಪೈಪೋಟಿ: ಬಿಜೆಪಿ (BJP) ಅಭ್ಯರ್ಥಿಯಾಗಿ ಎಚ್‌.ಎಸ್‌.ಗೋಪಿನಾಥ್‌ (HS Gipi

nath), ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೂಸಫ್‌ ಷರೀಫ್‌ (Yusuf Sharig - KGF babu ) ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ(Shinappa) ಕಣದಲ್ಲಿದ್ದರು. ಆದರೆ, ಗೋಪಿನಾಥ್‌ ಮತ್ತು ಯೂಸಫ್‌ ಷರೀಫ್‌ ನಡುವೆ ನೇರ ಹಣಾಹಣಿ ಇತ್ತು.  ಗೋಪಿನಾಥ್‌ ಅವರು ಈ ಹಿಂದೆ ಚುನಾವಣಾ ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರಲ್ಲಿ ಸೋಲನುಭವಿಸಿದ್ದರು. ಬಿಇ (ಸಿವಿಲ್‌ ಎಂಜಿನಿಯರ್‌) ಪದವೀಧರ ಆಗಿರುವ ಗೋಪಿನಾಥ್‌ ಅವರು ಬಿಜೆಪಿಯಲ್ಲಿ (BJP ) ಹಲವು ಹುದ್ದೆ ನಿರ್ವಹಿಸಿದ್ದರು. ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿರುವುದರಿಂದ ಸಂಘಟಿತವಾಗಿ ಪಕ್ಷದ ಮತ ಪಡೆವ ಚಾಣಕ್ಯತೆ ಇದೆ. ಅಲ್ಲದೆ, ಪಕ್ಷವೇ ಆಡಳಿತದಲ್ಲಿರುವ ಕಾರಣ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಕೇಳಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನು, ಕಾಂಗ್ರೆಸ್‌ನ (congress) ಯೂಸಫ್‌ ಷರೀಫ್‌ ರಾಜಕೀಯದಲ್ಲಿ (Politics) ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದರು ಇಲ್ಲಿ ಪ್ರಯೋಜನಚವಾಗಲಿಲ್ಲ. 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು. ಅವರ ವಿರುದ್ಧದ ಹಳೆಯ ಪ್ರಕರಣವೊಂದನ್ನು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ (ST Somashekar) ಕೆದಕಿದ್ದರಿಂದ ಸಾಕಷ್ಟು ಚರ್ಚೆಯನ್ನೂ ಹುಟ್ಟು ಹಾಕಿತ್ತು. 2015ರಲ್ಲಿ ಬಿಜೆಪಿಯ ದೊಡ್ಡ ಬಸವರಾಜು (Dodda Basavaraju)  ವಿರುದ್ಧ ಜಯಗಳಿಸಿದ್ದ ಕಾಂಗ್ರೆಸ್‌ನ ಎಂ.ನಾರಾಯಣಸ್ವಾಮಿ (M narayana swamy) ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ಕಾಂಗ್ರೆಸ್‌ ಯೂಸಫ್‌ಗೆ ಟಿಕೆಟ್‌ ನೀಡಲಾಗಿತ್ತು. ಬಿಜೆಪಿಯ (BJP) ಮತದಾರರು ಹೆಚ್ಚಿದ್ದರೂ ಕಾಂಗ್ರೆಸ್‌ಗೆ ಗೆಲ್ಲುವ ಆತ್ಮ ವಿಶ್ವಾಸ ಇತ್ತು. ಆದರೆ ನಿರೀಕ್ಷೆ ಹುಸಿಯಾಗಿ ಬಿಜೆಪಿ ಐತಿಹಾಸಿಕ ಗೆಲುವು ಪಡೆದಿದೆ. 

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ - BBMP), ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ (ZP) ಸದಸ್ಯರ ಮತಗಳು ಇಲ್ಲದ ಕಾರಣ ಗ್ರಾಮ ಪಂಚಾಯಿತಿ ( Grama panchayat) ಮತ್ತು ಪಟ್ಟಣ್ಣ ಪಂಚಾಯಿತಿ ಸದಸ್ಯರ ಮತಗಳೇ ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ