
ಬೆಂಗಳೂರು(ಆ.03): ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ. ಅವರೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
'ವಿಜಯೇಂದ್ರ ಮಾಡಿದ ಹಗರಣಗಳನ್ನು ಬಿಚ್ಚಿಡುತ್ತೇನೆ' ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತಿಗೆ ಶುಕ್ರವಾರ ಸುದ್ದಿಗಾರರ ಮೂಲಕ ತಿರುಗೇಟು ನೀಡಿದ ಅವರು, ಶಿವಕುಮಾರ್ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಅವರ ಬಳಿ ಭ್ರಷ್ಟಾಚಾರದ ಬಗ್ಗೆ ಹೇಳಿಸಿಕೊಳ್ಳುವ ದಿನಗಳು ಬಂದಿಲ್ಲ. ಅವರ ಕತೆ ಏನಾಗಿದೆ ಎನ್ನುವುದು ಗೊತ್ತಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡದೆ ಇರುವುದೇ ಒಳ್ಳೆಯದು ಎಂದು ಲೇವಡಿ ಮಾಡಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ನಡೆಸುವ ಭರವಸೆ ನೀಡಿ, ಜನರ ಕಿವಿಗೆ ಹೂ ಮುಡಿಸಿದವರ ಪಶ್ಚಾತ್ತಾಪದ ಯಾತ್ರೆ ಇದು. ನಮ್ಮ ಯಾತ್ರೆ ಯಶಸ್ವಿಯಾಗಲಿ ಎಂದು ಒಂದು ದಿನ ಮುಂಚಿತವಾಗಿ ಈ ಆಂದೋಲನ ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.
ಮೇಕೆದಾಟು ವಿವಾದ ಮಧ್ಯಸ್ಥಿಕೆ ವಹಿಸಲು ಪ್ರಧಾನಿ ಮೋದಿ ನಕಾರ: ಡಿಕೆಶಿ
ಸರ್ಕಾರದ ಹಗರಣಗಳ ಬಗ್ಗೆ ಉತ್ತರ ಕೊಡಬೇಕಾದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಈ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ. ನಾವು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ತೊಡೆ ತಟ್ಟಿದ್ದೇವೆ. ಅವರು ಉತ್ತರ ಕೊಡಲಿ ಎಂದರು.
ಕಾಂಗ್ರೆಸ್ಸಿನ ಪೋಸ್ಟರ್ ಅಭಿಯಾನದಬಗ್ಗೆಪ್ರತಿಕ್ರಿಯಿಸಿದ ವಿಜಯೇಂದ್ರ, ಇದಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಪೇಸಿಎಂ, 40% ಆರೋಪ ಮಾಡಿಯೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಎಂದು ತೀಕ್ಷ್ಮವಾಗಿ ಹೇಳಿದರು.
ಡಿಕೆಶಿ ಕತೆ ಏನು ಅಂತ ನನಗೆ ಗೊತ್ತಿದೆ ಶಿವಕುಮಾರ್ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳ ಬೇಡಿ. ಅವರ ಬಳಿ ಭ್ರಷ್ಟಾಚಾರದ ಬಗ್ಗೆ ಹೇಳಿಸಿಕೊಳ್ಳುವ ದಿನಗಳು ಬಂದಿಲ್ಲ. ಅವರ ಕತೆ ಏನಾಗಿದೆ ಎನ್ನುವುದು ಗೊತ್ತಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡದೆ ಇರುವುದೇ ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.