ಕರ್ನಾಟಕದ ಉಪಮುಖ್ಯಂತ್ರಿಗೆ ಕೊರೋನಾ ಅಟ್ಯಾಕ್: ಇದು 2ನೇ ಬಾರಿ!

Published : Apr 09, 2021, 06:37 PM ISTUpdated : Apr 09, 2021, 06:41 PM IST
ಕರ್ನಾಟಕದ ಉಪಮುಖ್ಯಂತ್ರಿಗೆ ಕೊರೋನಾ ಅಟ್ಯಾಕ್: ಇದು 2ನೇ ಬಾರಿ!

ಸಾರಾಂಶ

ಉಪಮುಖ್ಯಂತ್ರಿ ಗೋವಿಂದ್ ಕಾರಜೋಳ ಅವರಿಗೆ ಮತ್ತೆ ಕೊರೋನಾ ವೈರಸ್ ತಗುಲಿದೆ. ಈ ಹಿಂದೆಯೂ ಅವರಿಗೆ ಸೋಂಕು ತಗುಲಿತ್ತು.

ಬೆಂಗಳೂರು, (ಏ.09): ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಗೋವಿಂದ ಕಾರಜೋಳ ಅವರು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಏಪ್ರಿಲ್ 10 ಮತ್ತು 11ರಂದು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಅವರು ಪ್ರಚಾರ ನಡೆಸಬೇಕಿತ್ತು.ಆದರೆ, ಕೋವಿಡ್ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸಿಎಂ ಕಾರಜೋಳಗೆ ಕೊರೋನಾ, ಆಸ್ಪ​ತ್ರೆಗೆ ದಾಖ​ಲು
 
ನನಗಿರುವ ಕೋವಿಡ್ ಸೋಂಕು ಇತರರಿಗೆ ಹರಡಬಾರದೆಂಬ ಕಾರಣಕ್ಕೆ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಅನುಭವಿ ವೈದ್ಯರು ನನಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತನ್ನು ಇಂದಿನ ಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಇದಕ್ಕಾಗಿ ವಿಷಾದಿಸಿ, ಮತದಾರರ ಕ್ಷಮೆ ಕೋರುತ್ತೇನೆ ಎಂದು ಎಂದಿದ್ದಾರೆ.

 ಇನ್ನು ಕಾರಜೋಳ ಅವರಿಗೆ ಹಿಂದೆ ಕೊರೋನಾ ದೃಢಪಟ್ಟಿತ್ತು. ಇದೀಗ ಮತ್ತೆ ಎರಡನೇ ಬಾರಿಗೆ ಕೊರೋನಾ ಸೋಂಕು ತಗುಲಿರುವುದು ಕೊಂಚ ಆತಂಕಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!