ಅಧಿವೇಶನಕ್ಕೂ ಮುನ್ನವೇ ಕರ್ನಾಟಕ ಉಪಮುಖ್ಯಮಂತ್ರಿಗೆ ಕೊರೋನಾ ದೃಢ..!

Published : Sep 19, 2020, 03:43 PM ISTUpdated : Sep 19, 2020, 03:47 PM IST
ಅಧಿವೇಶನಕ್ಕೂ ಮುನ್ನವೇ ಕರ್ನಾಟಕ ಉಪಮುಖ್ಯಮಂತ್ರಿಗೆ ಕೊರೋನಾ ದೃಢ..!

ಸಾರಾಂಶ

ಅಧಿವೇಶ ಆರಂಭಕ್ಕೂ ಮುನ್ನವೇ ಜನಪ್ರತಿನಿಧಿಗಳಗೆ ಕೊರೋನಾ ಶಾಕ್ ಕೊಡುತ್ತುದೆ. ಇದೀಗ ಉಪಮುಖ್ಯಮಂತ್ರಿಗೂ ಕೊರೋನಾ ಪಾಸಿಟಿವ್ .

ಬೆಂಗಳೂರು, (ಸೆ.19): ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬೆನ್ನಲ್ಲೇ ಇದೀಗ ಉಪ ಮುಖ್ಯಮಂತ್ರಿ ಡಾ. ಸಿ.ಎನ್​. ಅಶ್ವಥ್ ನಾರಾಯಣ್​ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ಸೆ.16ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಸೋಂಕು ತುಗುಲಿದ್ದು, ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೀಗ ಡಿಸಿಎಂ ಅಶ್ವಥ್ ನಾರಾಯಣ್‌ಗೂ ಕೋವಿಡ್​ ಪಾಸಿಟಿವ್​ ಬಂದಿದೆ. ಈ ಬಗ್ಗೆ ಸ್ವತಃ ಅಶ್ವಥ್​ ನಾರಾಯಣ್​ ಅವರೇ ಟ್ವಿಟರ್​ನಲ್ಲಿ ಬಹಿರಂಗಪಡಿಸಿದ್ದಾರೆ.

ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು 

ಸೋಮವಾರದಿಂದ ವಿಧಾನಸಭೆಯ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಆದರೆ, ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆರೋಗ್ಯವಾಗಿದ್ದೆ. ವರದಿ ಪಾಸಿಟಿವ್​ ಇರುವ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ’ ಎಂದು ಡಿಸಿಎಂ ತಿಳಿಸಿದ್ದಾರೆ. ಅಲ್ಲದೆ ‘ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಇದೇ ಸೆಪ್ಟೆಂಬರ್ 21ರಂದು ಅಧಿವೇಶನ ಆರಂಭವಾಗುತ್ತಿದೆ. ಆದ್ಎ, ಅಧಿವೇಶ ಆರಂಭಕ್ಕೂ ಮುನ್ನವೇ ಕೋವಿಡ್​ ಸೋಂಕಿಕ ಜನಪ್ರತಿನಿಧಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಬಾರಿಯ ಅಧಿವೇಶನದಲ್ಲಿ ಬಹುತೇಕರು ಭಾಗವಹಿಸುವುದು ಅನುಮಾನವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ