Karnataka election 2023: ಕಾಫಿನಾಡಿನಲ್ಲೂ ಹ್ಯಾಟ್ರಿಕ್‌ ಹಿರೋಗಳು!

Published : Apr 22, 2023, 05:27 AM IST
Karnataka election 2023: ಕಾಫಿನಾಡಿನಲ್ಲೂ ಹ್ಯಾಟ್ರಿಕ್‌ ಹಿರೋಗಳು!

ಸಾರಾಂಶ

ಕಾಫಿಯ ನಾಡು ಚಿಕ್ಕಮಗಳೂರು, ವಿಧಾನಸಭಾ ಚುನಾವಣೆಯಲ್ಲಿ ಆಗಾಗ ಹೊಸ ದಾಖಲೆಯನ್ನು ಬರೆದಿದೆ. ಜಿಲ್ಲೆಯ ರಾಜಕಾರಣದಲ್ಲಿ 2004ರ ನಂತರದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಅಂದಿನಿಂದ ಇಂದಿನವರೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಖಾಡದಲ್ಲಿ ಹೊಸ ಮುಖಗಳಿಗಿಂತ ಹಳಬರೆ ಮತ್ತೆ ಮತ್ತೆ ಸ್ಪರ್ಧೆ ಮಾಡುತ್ತಿದ್ದಾರೆ.

ಆರ್‌. ತಾರಾನಾಥ್‌

ಚಿಕ್ಕಮಗಳೂರು (ಏ.22) : ಕಾಫಿಯ ನಾಡು ಚಿಕ್ಕಮಗಳೂರು, ವಿಧಾನಸಭಾ ಚುನಾವಣೆಯಲ್ಲಿ ಆಗಾಗ ಹೊಸ ದಾಖಲೆಯನ್ನು ಬರೆದಿದೆ.

ಕಡಿದಾಳ್‌ ಮಂಜಪ್ಪ ಅವರು ವಿಧಾನಸಭಾ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದ್ದರು. ಕಡೂರು ಕ್ಷೇತ್ರದಲ್ಲಿ ನಿರಂತರವಾಗಿ ನಾಲ್ಕು ಬಾರಿ ಕೆ.ಎಂ. ಕೃಷ್ಣಮೂರ್ತಿ ಜಯಗಳಿ ಸಿದ್ದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸಿ.ಟಿ.ರವಿ ಸಹ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು. ಇನ್ನು ಮಧ್ಯದಲ್ಲಿ ಯಾವುದೇ ಬ್ರೇಕ್‌ ಇಲ್ಲದೆ, ಸತತವಾಗಿ ಮೂರು ಚುನಾವಣೆಗಳಲ್ಲಿ ಕಡಿದಾಳ್‌ ಮಂಜಪ್ಪ, ಡಿ.ಎನ್‌. ಜೀವರಾಜ್‌, ಸಿ.ಆರ್‌. ಸಗೀರ್‌ ಅಹ್ಮದ್‌ ಜಯಗಳಿಸುವ ಮೂಲಕ ಹ್ಯಾಟ್ರಿಕ್‌ ಹಿರೋ ಎಂದೆನಿಸಿಕೊಂಡರು.

KARNATAKA ELECTION 2023: ಶೃಂಗೇರಿಯಲ್ಲಿಂದು ಡಿಕೆಶಿ ಚುನಾವಣಾ ಪ್ರಚಾರ

ಶೃಂಗೇರಿ ಕ್ಷೇತ್ರ

1952ರ ಮೊದಲ ವಿಧಾನಸಭಾ ಚುನಾವಣೆ(Karnataka assembly electin)ಯಲ್ಲಿ ಶೃಂಗೇರಿ, ತೀರ್ಥಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿತ್ತು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾರೋಗೊಳಿಗೆ ಗ್ರಾಮದವರಾದ ಕಡಿದಾಳ್‌ ಮಂಜಪ್ಪ ಅವರು ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರು. ನಂತರದಲ್ಲಿ ಅವರು 1957ರಲ್ಲಿ ಇದೇ ಕ್ಷೇತ್ರದಲ್ಲಿ ಅವಿರೋಧವಾಗಿ ಚುನಾಯಿತರಾದರು. 1962ರಲ್ಲಿ ಮತ್ತೊಮ್ಮೆ ಸ್ಪರ್ಧಿಸಿ ಜಯಗಳಿಸಿದರು. ಈ ಅವಧಿಯಲ್ಲಿ ಅವರಿಗೆ ಮುಖ್ಯಮಂತ್ರಿಯಾಗುವ ಸೌಭಾಗ್ಯ ಸಿಕ್ಕಿತ್ತು.

ಗೋವಿಂದೇಗೌಡ ಅವರು ಈ ಕ್ಷೇತ್ರದಲ್ಲಿ ಮೂರು ಬಾರಿ ಗೆಲವು ಸಾಧಿಸಿದರೂ ಕೂಡ ಮಧ್ಯದ ಒಂದು ಅವಧಿಯಲ್ಲಿ ಯು.ಕೆ. ಶಾಮಣ್ಣ ಜಯಗಳಿಸಿದ್ದರು. 2004 ರಿಂದ 2013ರ ನಿರಂತರ ಮೂರು ಚುನಾವಣೆಯಲ್ಲಿ ಬಿಜೆಪಿಯ ಡಿ.ಎನ್‌.ಜೀವರಾಜ್‌ ಜಯಗಳಿಸಿದರು. 2018ರ ಚುನಾವಣೆಯಲ್ಲಿ ಅವರು ಪರಾಭವಗೊಂಡಿದ್ದು, ಇದೀಗ ಮತ್ತೆ ಅವರು ಸ್ಪರ್ಧೆ ಮಾಡಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ(Chikkamagaluru assembly constituency)ದಲ್ಲಿ 1989 ರಿಂದ 1999ರವರೆಗೆ ನಿರಂತರವಾಗಿ ಸಿ.ಆರ್‌. ಸಗೀರ್‌ ಅಹ್ಮದ್‌ ಶಾಸಕರಾಗಿದ್ದರು, 3 ಬಾರಿಯ ಹ್ಯಾಟ್ರಿಕ್‌ ಗೆಲುವನ್ನು ಶಾಸಕ ಸಿ.ಟಿ. ರವಿ 4 ಬಾರಿ ಗೆಲ್ಲುವ ಮೂಲಕ ಬ್ರೇಕ್‌ ಮಾಡಿದರು. ಈ ಬಾರಿಯೂ ಕೂಡ ಅವರು ಸ್ಪರ್ಧೆ ಮಾಡಿದ್ದಾರೆ.

ಕಡೂರು ಕ್ಷೇತ್ರದಲ್ಲಿ ಕೆ.ಎಂ. ಕೃಷ್ಣಮೂರ್ತಿ ಅವರು 1994 ರಿಂದ 2008ರವರೆಗೆ ಸತತವಾಗಿ ನಾಲ್ಕು ಬಾರಿ ಗೆಲುವು ಸಾಧಿಸಿದರು. ಬೇರೆ ಯಾರಿಗೂ ಕೂಡ ಈ ಸಾಧನೆ ಬ್ರೇಕ್‌ ಮಾಡಲು ಆಗಲೇ ಇಲ್ಲ. ಮೂಡಿಗೆರೆ ಕ್ಷೇತ್ರದಲ್ಲಿ 2004, 2008ರಲ್ಲಿ ಎಂ.ಪಿ. ಕುಮಾರಸ್ವಾಮಿ ಗೆಲವು ಸಾಧಿಸಿದರು. ಆದರೆ, 2013ರಲ್ಲಿ ಅವರು ಪರಾಭವಗೊಂಡರು. 2018ರಲ್ಲಿ ಮತ್ತೆ ಶಾಸಕ ರಾದರು. ಹಾಗಾಗಿ ನಿರಂತರ ಹ್ಯಾಟ್ರಿಕ್‌ ಗೆಲುವಿಗೆ ಮಧ್ಯ ಬ್ರೇಕ್‌ ಸಿಕ್ಕಿತು.

ಚಿಕ್ಕಮಗಳೂರು: 103 ನಾಮಿನೇಷನ್‌, 2 ತಿರಸ್ಕಾರ 100 ನಾಮಪತ್ರ ಸಿಂಧು

ಜಿಲ್ಲೆಯ ರಾಜಕಾರಣದಲ್ಲಿ 2004ರ ನಂತರದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಅಂದಿನಿಂದ ಇಂದಿನವರೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಖಾಡದಲ್ಲಿ ಹೊಸ ಮುಖಗಳಿಗಿಂತ ಹಳಬರೆ ಮತ್ತೆ ಮತ್ತೆ ಸ್ಪರ್ಧೆ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್