Belagavi: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ: ಬಾಲಚಂದ್ರ ಜಾರಕಿಹೊಳಿ

Published : May 10, 2023, 08:04 PM ISTUpdated : May 10, 2023, 08:08 PM IST
Belagavi: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ: ಬಾಲಚಂದ್ರ ಜಾರಕಿಹೊಳಿ

ಸಾರಾಂಶ

ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. 

ಗೋಕಾಕ (ಮೇ.10): ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ.3 ಮತಗಟ್ಟೆ131 ರಲ್ಲಿ ಬುಧವಾರ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬೊಮ್ಮಾಯಿ ಅವರು ಈಗಾಗಲೇ ಈ ಬಾರಿ ನಿರ್ಧಾರ ಬಿಜೆಪಿ ಸರ್ಕಾರವೆಂದು ಹೇಳಿದ್ದಾರೆ. ಹಾಗೆಯೇ ನಮ್ಮ ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುವುದರೊಂದಿಗೆ ಮತ್ತೊಮ್ಮೆ ನಮ್ಮದೇ ಸರ್ಕಾರ ಬರುತ್ತದೆಂಬ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

ಬಿಸಿಲು ಹೆಚ್ಚಿಗೆ ಇದ್ದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದೊಂದು ಖುಷಿ ಪಡುವಂತಹ ವಿಷಯ. ಇನ್ನೂ ಹೆಚ್ಚೆಚ್ಚು ಜನರು ಬಂದು ವೋಟ್‌ ಮಾಡಬೇಕೆಂದು ನಾವೆಲ್ಲರೂ ಮನವಿ ಮಾಡಿಕೊಳ್ಳುತ್ತಿದ್ದೇವೆ. ಚೆನ್ನಾಗಿ ಆಗುತ್ತಿದೆ. ಒಳ್ಳೆಯದು ಆಗುತ್ತದೆ ಎಂದು ಆತ್ಮವಿಶ್ವಾಸದಿಂದ ನುಡಿದರು. ಗೋಕಾಕ, ಅರಭಾವಿ ಸೇರಿದಂತೆ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಆಗುತ್ತದೆ. ಒಳ್ಳೆಯ ಮತದಾನ ಆಗುತ್ತಿದ್ದು, ಜಿಲ್ಲೆಯಲ್ಲಿ ಬಿಜೆಪಿಗೆ ಒಳ್ಳೆಯ ಸ್ಪಂದನೆ ಇದ್ದು, ಹೆಚ್ಚಿನ ಸೀಟುಗಳು ಬಿಜೆಪಿಗೆ ಬರುತ್ತವೆ ಎಂದರು.

ನಳನಳಿಸಲಿದೆ ಶಿರಸಿ ಜೈನ ಮಠದ ಕೆರೆ: 30 ಅಡಿ ಆಳದವರೆಗೆ ಹೂಳು ತೆರವು

ಅರಭಾವಿ ಮತಕ್ಷೇತ್ರದಲ್ಲಿ ಒನ್‌ಸೈಡೆಡ್‌ ಫಲಿತಾಂಶ ಆಗುತ್ತದೆ. ರಾಜ್ಯದಲ್ಲಿ ಅರಭಾವಿ ಮತಕ್ಷೇತ್ರದಿಂದ ಬಾಲಚಂದ್ರ ಅವರು ಅತೀ ಹೆಚ್ಚು ಲೀಡ್‌ನಿಂದ ಆಯ್ಕೆಯಾಗಿ ಬರುತ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒನ್‌ಸೈಡೆಡ್‌ ಅಂತ ಅನ್ನಲಿಕ್ಕೆ ಬರುವುದಿಲ್ಲ. ಚುನಾವಣೆಯಲ್ಲಿ ವಿರೋಧ ಪಕ್ಷದವರು ಇದ್ದೇ ಇರುತ್ತಾರೆ. ಒಳ್ಳೆ ಮತದಾನ ನಡೆದಿದೆ. ವಿರೋಧ ಪಕ್ಷದವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಮ್ಮ ಕಾರ್ಯಕರ್ತರು, ಬಿಜೆಪಿ ಮುಖಂಡರು ಸೇರಿದಂತೆ ಜನರು ಕೂಡ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕೆಂದು ಪ್ರಯತ್ನ ಮಾಡಿದ್ದಾರೆ. ನೋಡೋಣ ಜನರ ಆಸೆಯಂತಾಗಲಿ ಎಂದು ನಾವು ಕೂಡ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

Karnataka Election 2023: ಮತದಾರರನ್ನು ಸೆಳೆಯಲು ಮತಗಟ್ಟೆಯಲ್ಲಿ ಧಾರವಾಡ ಪೇಡೆ ವಿಶೇಷ!

ಪ್ರತಿ ಬಾರಿಯೂ ನಮಗೆ ನಾವು ವೋಟ್‌ ಹಾಕಿಕೊಳ್ಳಲು ಅವಕಾಶ ಸಿಕ್ಕಿಲ್ಲ. ಗೋಕಾಕಿನಲ್ಲಿ ವೋಟ್‌ ಹಾಕುತ್ತಿದ್ದೇನೆ. ಸ್ಪರ್ಧೆ ಮಾಡಿದ ಅರಭಾವಿ ಕ್ಷೇತ್ರಕ್ಕೆ ಹೋಗುತ್ತೇನೆ. ಜನರ ಪ್ರೀತಿ ಇರುವವರೆಗೂ ರಾಜಕಾರಣ ಮಾಡುವುದು. ಬೇಡ ಅಂದಾಗ ಸುಮ್ಮನೆ ಇರಬೇಕಾಗುತ್ತೆ. ಈ ಬಾರಿನ ಗೆಲುವಿನೊಂದಿಗೆ ಡಬಲ್‌ ಹ್ಯಾಟ್ರಿಕ್‌ ಆಗುತ್ತದೆ.
- ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ, ಅರಭಾವಿ ಮತಕ್ಷೇತ್ರ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!