
ಹುಬ್ಬಳ್ಳಿ: (ಏ.13) : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು.
ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ವಿಶ್ವಾಸವಿದೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂದರು.
ಯಡಿಯೂರಪ್ಪ(BS Yadiyurappa)ನವರನ್ನು ಭೇಟಿಯಾಗಬೇಕಿತ್ತು. ವಿಮಾನ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದರು.
ದೆಹಲಿಯಲ್ಲಿ ಟಿಕೆಟ್ಗಾಗಿ ಮಾಜಿ ಸಿಎಂ ಶೆಟ್ಟರ್ ಅಲೆದಾಟ, ಜೋಶಿ ಬಳಿಕ ಜೆಪಿ ನಡ್ಡಾ ಮನೆಗೆ ತೆರಳಿ ಚರ್ಚೆ!
ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಲ್ಲದೇ ಕಳೆದ ಎರಡು ವರ್ಷದಿಂದ ಯಾವುದೇ ಸ್ಥಾನಮಾನ ಇಲ್ಲ. ಶಾಸಕನಾಗಿ ಕೆಲಸ ಮಾಡಿಕೊಂಡಿದ್ದೆ. ಸಕಾರಣ ಇಲ್ಲದೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ ಬಳಿಕ ಮುಂದೇನಾಗುತ್ತೊ ನೋಡೋಣ ಎಂದು ಹೇಳಿದರು.
ಯಾವುದೇ ಕಾರಣವಿಲ್ಲದೇ ನಾನು ನಿವೃತ್ತಿ ಘೋಷಣೆ ಮಾಡಲು ಸಿದ್ಧನಿದ್ದೇನೆ. ಆದರೆ, ರಾಜಕಾರಣದಲ್ಲಿ ಗೌರವಯುತವಾಗಿ ಹೊರಗೆ ಹೋಗಬೇಕು ಎಂಬುದು ನನ್ನ ಅಭಿಪ್ರಾಯ. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು ಎಂದರು.
ಶೆಟ್ಟರ್ ಬೆಂಬಲಿಸಿ ಬೆಂಬಲಿಗರ ಪ್ರತಿಭಟನೆ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್(Jagadeesh shettar) ಅವರಿಗೆ ಬಿಜೆಪಿ ಟಿಕೆಟ್(BJP Ticket) ತಪ್ಪಿದ್ದಕ್ಕೆ ಅವರ ಬೆಂಬಲಿಗರ ಆಕ್ರೋಶ ಬುಧವಾರವೂ ಮುಂದುವರಿದಿತ್ತು. ಬುಧವಾರ ಬೆಳಗ್ಗೆ ಶೆಟ್ಟರ್ ಅವರು ಹೈಕಮಾಂಡ್ ಬುಲಾವ್ನಂತೆ ದೆಹಲಿಗೆ ತೆರಳಿದರೆ, ಇತ್ತ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ನಡುವೆ ಬೆಂಬಲಿಗರು ಈ ಸಲವೂ ಶೆಟ್ಟರ್ ಬೇಕೇ ಬೇಕು ಎಂದು ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ(Hubballi Dharwad central constituency)ದಿಂದ ಶೆಟ್ಟರ್ ಅವರನ್ನು ಕೈಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆಂಬಲಿಗರು, ಇಲ್ಲಿನ ಸರ್ವೋದಯ ಸರ್ಕಲ್ನಲ್ಲಿ ಜಮೆಯಾಗಿ ಪ್ರತಿಭಟನೆ ನಡೆಸಿದರು.
ಶೆಟ್ಟರ್ಗೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತೆ: ಯಡಿಯೂರಪ್ಪ
ಬೆಂಬಲಿಗರು ಹಾಗೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ಶೆಟ್ಟರ್ ಅವರ ಭಾವಚಿತ್ರ ಹಿಡಿದು ಶೆಟ್ಟರ್, ಶೆಟ್ಟರ್, ಜಗದೀಶ ಶೆಟ್ಟರ್ ಎಂದು ಘೋಷಣೆ ಕೂಗಿದರು. ಶೆಟ್ಟರ್ ಅವರಿಗೆ ಈ ಸಲವೂ ಟಿಕೆಟ್ ಕೊಡಲೇಬೇಕು ಎಂದು ಒತ್ತಾಯಿಸಿದರು. ಶೆಟ್ಟರ್ ಅವರು ಕಳೆದ 30 ವರ್ಷದಿಂದ ಶಾಸಕರಾಗಿದ್ದಾರೆ. ಅವರ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಕಾರಣ ಅವರಿಗೆ ಟಿಕೆಟ್ ಕೊಡಲೇಬೇಕು ಎಂದು ಬೆಂಬಲಿಗರು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.