ಕಾಂಗ್ರೆಸ್‌ ಪಕ್ಷ ಮೋದಿಯವರ ಶತಾಯುಷಿ ತಾಯಿ ಬಗ್ಗೆ ಅವಹೇಳನ ಮಾಡಿದ್ದ ಪಕ್ಷ. ಸ್ಮೃತಿ ಇರಾನಿ

Published : Apr 28, 2023, 01:30 AM IST
ಕಾಂಗ್ರೆಸ್‌ ಪಕ್ಷ ಮೋದಿಯವರ ಶತಾಯುಷಿ ತಾಯಿ ಬಗ್ಗೆ ಅವಹೇಳನ ಮಾಡಿದ್ದ ಪಕ್ಷ. ಸ್ಮೃತಿ ಇರಾನಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದರೆ ಸತ್ತು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಹೇಳಿಕೆ ನೋಡಿದರೆ, ಕಾಂಗ್ರೆಸ್‌ ನಿರ್ಲಜ್ಜ ಪಕ್ಷ ಎನ್ನುವುದು ಗೊತ್ತಾಗುತ್ತದೆ. ಇಂತಹ ನಿರ್ಲಜ್ಜ ಪಕ್ಷ ಮೋದಿ ಸಾವಿನ ಕೂಪಕ್ಕೆ ತಳ್ಳುವ ಆಹ್ವಾನ ನೀಡಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಳಗಾವಿ (ಏ.28): ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದರೆ ಸತ್ತು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಹೇಳಿಕೆ ನೋಡಿದರೆ, ಕಾಂಗ್ರೆಸ್‌ ನಿರ್ಲಜ್ಜ ಪಕ್ಷ ಎನ್ನುವುದು ಗೊತ್ತಾಗುತ್ತದೆ. ಇಂತಹ ನಿರ್ಲಜ್ಜ ಪಕ್ಷ ಮೋದಿ ಸಾವಿನ ಕೂಪಕ್ಕೆ ತಳ್ಳುವ ಆಹ್ವಾನ ನೀಡಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಈ ಕಾಂಗ್ರೆಸ್‌ ಪಕ್ಷ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಬಗ್ಗೆ ಅವಹೇಳನ ಮಾಡಿದ್ದ ಪಕ್ಷ. ನರೇಂದ್ರ ಮೋದಿಯವರ ಸ್ವರ್ಗೀಯ ತಂದೆಯವರ ಅಪಮಾನ ಮಾಡಿದ ನಿರ್ಲಜ್ಜ ಪಕ್ಷ ಕಾಂಗ್ರೆಸ್‌. ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಬಯಸುತ್ತೇನೆ. ನೀವು ಇಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿದ್ದೀರಿ. ಆ ರಾಜಕೀಯ ಪಕ್ಷದ ಇತಿಹಾಸ ಹೇಗಿದೆ ಅಂದರೆ ದಲಿತ ನಾಯಕನಾದರೆ ರಾಹುಲ್ ಗಾಂಧಿ ತಮ್ಮ ಚಪ್ಪಲಿ ಅವರಿಂದ ತೆಗೆಸುತ್ತಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಕೊಟ್ಟ ಭರವಸೆ ಈಡೇರಿಸಿಲ್ಲ: ನಿರ್ಮಲಾ ಸೀತಾರಾಮನ್‌

ದೇಶದಲ್ಲಿ ಮೊದಲ ಬಾರಿ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ ಅಭ್ಯರ್ಥಿ ಮಾಡಿದರೆ ಅವರ ಬಗ್ಗೆ ಅವಹೇಳನ ಹೇಳಿಕೆ ನೀಡುವಂತ ಪಕ್ಷ ಕಾಂಗ್ರೆಸ್‌. ನಿಮ್ಮ ಪಕ್ಷ ಹಿಂದೂ ಸಮಾಜಕ್ಕೆ ಅಪಮಾನ ಮಾಡುವರನ್ನು ಸ್ಟಾರ್‌ ಪ್ರಚಾರಕ ಮಾಡಿದೆ. ಕಾಂಗ್ರೆಸ್‌ ಪಕ್ಷ ಎಸ್‌ಡಿಪಿಐ ಬೆಂಬಲ ಕೇಳುತ್ತದೆ. ಪಿಎಫ್‌ಐ ಗೂಂಡಾಗಳನ್ನು ಬಿಡುಗಡೆ ಮಾಡುವ ಮಾತುಗಳನ್ನಾಡುತ್ತದೆ.ಕಾಂಗ್ರೆಸ್‌ ನಾಯಕು ಈಗ ಮತ್ತೊಮ್ಮೆ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಖರ್ಗೆ ಅವರು ವಯಸ್ಸಿನಲ್ಲಿ ನನಗಿಂತ ದೊಡ್ಡವರು, ನಿಮಗೆ ಇದು ಶೋಭೆ ತರುವುದಿಲ್ಲ. ನಿಮಗೂ ಗೊತ್ತು, ನಮಗೂ ಗೊತ್ತಿದೆ. ಮೇಡಮ್‌ ಆದೇಶ ಬಂದಿದ್ದಕ್ಕೆ ನರೇಂದ್ರ ಮೋದಿಗೆಖರ್ಗೆ ಬೈಯ್ದಿದ್ದಾರೆ ಎಂದು ಇರಾನಿ ಟೀಕಿಸಿದರು.

ನಾನು ಗಾಂಧಿ ಕುಟುಂಬಕ್ಕೆ ಹೇಳಬಯಸುತ್ತೇನೆ. ನೀವು ಮೋದಿ ಸಾವು ಬಯಸಿದರೆ, ಕರ್ನಾಟಕದ ಮಹಿಳೆಯರು ಅವರ ದೀರ್ಘಾಯುಷ್ಯ ಪ್ರಾರ್ಥನೆ ಮಾಡುತ್ತಾರೆ. ಇಂದು ಮೋದಿ ಗೆಲ್ಲಿಸುವಂತೆ ಮಹಿಳೆಯರಿಗೆ ವಿಶೇಷ ಪ್ರಾರ್ಥನೆ ಮಾಡುತ್ತೇನೆ ಎಂದ ಅವರು, ಕೋವಿಡ್‌ ವೇಳೆ ಕಾಂಗ್ರೆಸ್‌ ಸರ್ಕಾರ ಇದ್ದರೆ ಉಚಿತ ವ್ಯಾಕ್ಸಿನ್‌ ಸಿಗುತ್ತಿತ್ತಾ ಎಂದು ಪ್ರಶ್ನಿಸಿದರು. ಒಂದು ಇಂಜೆಕ್ಷನ್‌ ಬೆಲೆ . 600 ಮೂರು ಡೋಸ್‌ ವ್ಯಾಕ್ಸಿನ್‌ಗೆ . 1800 ಆಗುತ್ತದೆ. ಕಾಂಗ್ರೆಸ್‌ ಪಕ್ಷ ಮೋದಿ ಹಠಾವೋ ವ್ಯಾಕ್ಸಿನ್‌ ಹಠಾವೋ, ವಿದೇಶದಿಂದ ವ್ಯಾಕ್ಸಿನ್‌ ತರಿಸಿ ಅನ್ನುತ್ತಿದ್ದರು. 160 ದೇಶಗಳಲ್ಲಿ ಭಾರತದ ವ್ಯಾಕ್ಸಿನ್‌ ಹೋಗಿದೆ ಎಂದು ಹೇಳಿದರು.

ಶಿವಮೊಗ್ಗ ಏರ್‌​ಪೋ​ರ್ಟ್‌ನಲ್ಲಿ ‘ಕಾಂಗ್ರೆಸ್’ ಅಭ್ಯರ್ಥಿಗಳಿಗೆ ಶುಭ ಕೋರಿದ ರಾಹುಲ್‌ ಗಾಂಧಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋಲುವುದು ಗ್ಯಾರಂಟಿ. ಸೋಲಿನ ಭೀತಿಯಿಂದ ಬಿಜೆಪಿ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ. ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಜಗಳ ಎಲ್ಲರಿಗೂ ಗೊತ್ತಿದೆ. ನಾವು ರಾಜ್ಯದ ಜನರ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಸ್ಮೃತಿ ಇರಾನಿ ಹೇಳಿದರು. ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಬೆಳಗಾವಿ ಗ್ರಾಮೀಣ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ, ಪಕ್ಷದ ಮುಖಂಡ ಕಿರಣ ಜಾಧವ ಮೊದಲಾದವರು ಉಪಸ್ಥಿತರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್