ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ; ಬಿಜೆಪಿಯಿಂದ 27 ಶೆಟ್ಟರ್‌ ಬೆಂಬಲಿಗರ ಉಚ್ಚಾಟನೆ

Published : Apr 29, 2023, 09:24 AM IST
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ; ಬಿಜೆಪಿಯಿಂದ 27 ಶೆಟ್ಟರ್‌ ಬೆಂಬಲಿಗರ ಉಚ್ಚಾಟನೆ

ಸಾರಾಂಶ

ಮಾಜಿ ಸಿಎಂ ಜಗದೀಶ ಶೆಟ್ಟರ್‌ ಬಿಜೆಪಿ ತೊರೆದ ಬೆನ್ನಲ್ಲೇ ಇದೀಗ ಅವರನ್ನು ಬೆಂಬಲಿಸಿರುವ 27 ಮುಖಂಡರನ್ನು ಪಕ್ಷ ಉಚ್ಛಾಟಿಸಿದೆ. ಆದರೆ, ಪಕ್ಷಕ್ಕೆ ರಾಜೀನಾಮೆ ನೀಡಿರುವ ಕೆಲವರನ್ನೂ ಉಚ್ಛಾಟಿಸಿರುವುದು ವಿಶೇಷ.

ಹುಬ್ಬಳ್ಳಿ (ಏ.29) : ಮಾಜಿ ಸಿಎಂ ಜಗದೀಶ ಶೆಟ್ಟರ್‌ ಬಿಜೆಪಿ ತೊರೆದ ಬೆನ್ನಲ್ಲೇ ಇದೀಗ ಅವರನ್ನು ಬೆಂಬಲಿಸಿರುವ 27 ಮುಖಂಡರನ್ನು ಪಕ್ಷ ಉಚ್ಛಾಟಿಸಿದೆ. ಆದರೆ, ಪಕ್ಷಕ್ಕೆ ರಾಜೀನಾಮೆ ನೀಡಿರುವ ಕೆಲವರನ್ನೂ ಉಚ್ಛಾಟಿಸಿರುವುದು ವಿಶೇಷ.

ಸೆಂಟ್ರಲ್‌ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿ ಮಹೇಶ ಟೆಂಗಿನಕಾಯಿ ಇದ್ದಾರೆ. ಆದರೆ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬ ಹಿನ್ನೆಲೆಯಲ್ಲಿ ಮುಖಂಡರು, ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ನಿಗಮ ಮಂಡಳಿಗಳ ಮಾಜಿ ಅಧ್ಯಕ್ಷರು ಸೇರಿ 27 ಜನರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ಚುನಾವಣೆ ಶೆಟ್ಟರ್‌ ವರ್ಸಸ್‌ ಜೋಶಿ ಎಂಬಂತಾಗಿ : ಶೆಟ್ಟರ್ ವಿಶ್ಲೇಷಣೆ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರ(Hubballi-dharwad central assembly constituency)ದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ ಶೆಟ್ಟರ್‌(Jagadish shettar) ಅವರ ಜೊತೆಗೆ ಗುರುತಿಸಿಕೊಂಡ ಹಿನ್ನೆಲೆ ಮತ್ತು ಬಿಜೆಪಿಯಲ್ಲೇ ಇದ್ದುಕೊಂಡು ಪಕ್ಷದ ಅಭ್ಯರ್ಥಿ ಮಹೇಶ ಟೆಂಗಿನಕಾಯಿ(Mahesh tenginakayi) ಅವರನ್ನು ಬೆಂಬಲಿಸದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ (ಉಚ್ಚಾಟನೆಗೂ ಮೊದಲೇ ರಾಜೀನಾಮೆ ಕೊಟ್ಟಿದ್ದರು),

ಪಾಲಿಕೆಯ ಮಾಜಿ ಸದಸ್ಯ ಮಹೇಶ ಬುರ್ಲಿ, ಶಂಕರ ಸುಂಕದ, ಮಂಜು ದಲಭಂಜನ, ವಿರೂಪಾಕ್ಷಿ ರಾಯನಗೌಡ್ರ, ನಾಗರಾಜ ಪಟ್ಟಣ, ವಿಜಯಲಕ್ಷ್ಮೀ ತಿಮ್ಮೊಲೆ, ಮಹೇಶ ಪತ್ತಾರ, ಭಾರತಿ ಟಪಾಲ, ಶೀಲನ್‌ ಕ್ಸೇವಿಯರ್‌, ಇಮ್ತಿಯಾಜ್‌ ಮುಲ್ಲಾ, ರವಿ ರಾಮದುರ್ಗ, ರಮಾನಾಥ ಶೆಣೈ, ಶಿವು ಕೊಪ್ಪದ, ಶಿವರುದ್ರಪ್ಪ ಬಡಿಗೇರ, ವಿನಾಯಕ ಜಿತೂರಿ, ನಾಶೀರ ತಂಬೂರಿ, ಬಸಣ್ಣ ಹೆಬ್ಬಳ್ಳಿ, ಹನುಮಂತಪ್ಪ ಚಲವಾದಿ, ರಾಧಾ ಪಟ್ಟಣಶೆಟ್ಟಿ, ರಾಜು ವಂದಾಲ, ಯಮನವ್ವ ವಂದಾಲ, ವಿವೇಕ ಹಳ್ಳಿ, ಜಯಶ್ರೀ ನಿಂಬರಗಿ, ಹಟೇಲಸಾಬ್‌ ಮುಲ್ಲಾ ಹಾಗೂ ಸದಾಶಿವ ಚೌಶೆಟ್ಟಿಅವರನ್ನು ಆರು ವರ್ಷ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೈನ ಸಮುದಾಯ ಈ ಬಾರಿ ನನ್ನ ಕೈ ಬಲಪಡಿಸಲಿದೆ: ಸವದಿ ವಿಶ್ವಾಸ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ