Belagavi Rural Election Result 2023: ಹೆಬ್ಬಾಳಕರ್ ಎದುರು ನಡೆಯದ ಜಾರಕಿಹೊಳಿ ಆಟ, ಕಾಂಗ್ರೆಸ್‌ಗೆ ಭರ್ಜರಿ ಗೆಲುವು..!

Published : May 13, 2023, 02:20 PM ISTUpdated : May 13, 2023, 04:35 PM IST
Belagavi Rural Election Result 2023: ಹೆಬ್ಬಾಳಕರ್ ಎದುರು ನಡೆಯದ ಜಾರಕಿಹೊಳಿ ಆಟ, ಕಾಂಗ್ರೆಸ್‌ಗೆ ಭರ್ಜರಿ ಗೆಲುವು..!

ಸಾರಾಂಶ

ಬಿಜೆಪಿಯ ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ಜಯ ಸಾಧಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ 99,919 ಪಡೆದರೆ, ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ 45,982 ಪಡೆದಿದ್ದಾರೆ. ಈ ಮೂಲಕ ಲಕ್ಷ್ಮೀ ಹೆಬ್ಬಾಳಕರ್ 53,937 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ(ಮೇ.13): ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಬಿಜೆಪಿಯ ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ಜಯ ಸಾಧಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ 99,919 ಪಡೆದರೆ, ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ 45,982 ಪಡೆದಿದ್ದಾರೆ. ಈ ಮೂಲಕ ಲಕ್ಷ್ಮೀ ಹೆಬ್ಬಾಳಕರ್ 53,937 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಗೆಲ್ಲಬಾರದು ಅಂತ ಬಿಜೆಪಿಯ ರಮೇಶ್‌ ಜಾರಕಿಹೊಳಿ ರಣತಂತ್ರವನ್ನ ಹೆಣೆದಿದ್ದರು. ಆದರೆ, ರಮೇಶ್‌ ಜಾರಕಹೊಳಿ ಅವರ ರಣತಂತ್ರವನ್ನ ಲಕ್ಷ್ಮೀ ಹೆಬ್ಬಾಳಕರ್ ಬುಡಮೇಲು ಮಾಡುವಲ್ಲಿ ಯಶಸ್ವಿಯಾಗಿದ್ದರು.

Karnataka Election Results 2023: ಸೋಲಿನ ಸಾಗರದಲ್ಲಿ ಶಿಗ್ಗಾಂವಿಯಲ್ಲಿ ಕಮಲ ಅರಳಿಸಿದ ಬೊಮ್ಮಾಯಿ

ಈ ಕ್ಷೇತ್ರದಲ್ಲಿ ರಮೇಶ್‌ ಜಾರಕಿಹೊಳಿ ಅವರು ಸೂಚಿಸಿದವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿತ್ತು. ಆದರೆ, ಮತದಾರ ಪ್ರಭು ಲಕ್ಷ್ಮೀ ಹೆಬ್ಬಾಳಕರ್ ಅವರನ್ನ ಗೆಲ್ಲಿಸಿದ್ದಾರೆ. ಈ ಕ್ಷೇತವನ್ನ ರಮೇಶ್‌ ಜಾರಕಿಹೊಳಿ ಅವರು ಬಹಳ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಹೆಬ್ಬಾಳಕರ್ ಜಾರಕಿಹೊಳಿ ರಾಜಕೀಯ ಬದ್ಧ ವೈರಿಗಳಾಗಿದ್ದಾರೆ. ರಮೇಶ್ ಜಾರಕಿಹೊಳಿ ಸೂಚಿಸಿದ ಅಭ್ಯರ್ಥಿ ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ ಸೋಲು ಅನುಭವಿಸಿದ್ದಾರೆ.  ಬೆಳಗಾವಿ ಗ್ರಾಮೀಣದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.  

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ