
ಬೆಂಗಳೂರು(ಜ.13):"ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯಲಿದ್ದು, ಈಗಾಗಲೇ ಸಿಎಂ ಬಿ. ಎಸ್. ಯಡಿಯೂರಪ್ಪ ಸಚಿವರಾಗುವ ಏಢಳು ಮಂದಿಯ ಹೆಸರು ಘೋಷಿಸಿ್ದ್ದಾಮಾಹಿರೆ. ಅಲ್ಲದೇ ಈ ಪಟ್ಟಿಯನ್ನು ರಾಜಭವನಕ್ಕೂ ಕಳುಹಿಸಿದ್ದಾರೆ. ಮುನಿರತ್ನಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪಿದ್ದು, ಬಿಎಸ್ವೈ ಅವರ ಮನವೊಲಿಸುವ ಯತ್ನದಲ್ಲಿದ್ದಾರೆ. ಹೀಗಿರುವಾಗಲೇ ಅತ ಅಬಕಾರಿ ಸಚಿವ ಎಚ್. ನಾಗೇಶ್ಗೆ ಶಾಕಿಂಗ್ ಸುದ್ದಿ ಲಭಿಸಿದೆ.
ಹೌದು ಪ್ರಮಾಣವಚನ ಸ್ವೀಕರಿಸಲಿರುವ ಏಳು ಮಂದಿಯ ಹೆಸರು ಘೋಷಿಸಿ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಮತ್ತೊಂದು ಮಹತ್ವದ ವಿಚಾರ ಬಹಿರಂಗಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ 'ಸಂಪುಟದಿಂದ ಒಂದು ಸ್ಥಾನ ಖಾಲಿ ಇಟ್ಟುಕೊಂಡಿದ್ದೇವೆ. ಅಬಕಾರಿ ಅಚಿವ ಎಚ್. ನಾಗೇಶ್ ಜೊತೆಯ ಈ ಬಗ್ಗೆ ಮಾತನಾಡಿದ್ದೇವೆ. ಅವರ ಮನವೊಲಿಸುತ್ತೇವೆ' ಎಂದಿದ್ದಾರೆ.
ಅಲ್ಲದೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆಯೂ ಈ ಬಗ್ಗೆ ಚರ್ಚಿಸಿ ಬಳಿಕ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.