ಕರ್ನಾಟಕದ ಸಚಿವರೊಬ್ಬರಿಗೆ ವಕ್ಕರಿಸಿದ ಕೊರೋನಾ..!

Published : Jul 26, 2020, 02:33 PM ISTUpdated : Jul 26, 2020, 02:54 PM IST
ಕರ್ನಾಟಕದ ಸಚಿವರೊಬ್ಬರಿಗೆ ವಕ್ಕರಿಸಿದ ಕೊರೋನಾ..!

ಸಾರಾಂಶ

ಕೊರೋನಾ ಮಹಾಮಾರಿ ಇದೀಗ ಕರ್ನಾಟಕದ ಓರ್ವ ಸಚಿವರಿಗೆ ವಕ್ಕರಿಸಿಕೊಂಡಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರುವಾಗಿದೆ.  

ಬಳ್ಳಾರಿ,(ಜುಲೈ,26): ಅರಣ್ಯ ಸಚಿವ, ವಿಜಯನಗರ (ಹೊಸಪೇಟೆ) ಶಾಸಕ ಹಾಗೂ ಬಳ್ಳಾರಿ ಜಿಲ್ಲೆ ಕೋವಿಡ್ ಉಸ್ತುವಾರಿಯಾಗಿರುವ ಆನಂದ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಶುಕ್ರವಾರ ಕೋವಿಡ್ ಪರೀಕ್ಷೆ ಮಾಡಿಸಿದ್ದ ಆನಂದ್ ಸಿಂಗ್ ಅವರಿಗೆ ಶನಿವಾರ ರಾತ್ರಿ ವರದಿ ಬಂದಿದ್ದು, ಕೊರೋನಾ ಇರುವುದು ಖಚಿತವಾಗಿದೆ. ಆದರೆ ಯಾವ ರೋಗಲಕ್ಷಣವಿಲ್ಲದೆ ಸಚಿವರಿಗೆ ಕೊರೋನಾ ಇರುವುದು ಕಂಡುಬಂದಿದೆ.

ಕೋವಿಡ್‌ ಆಸ್ಪತ್ರೆಗೆ ಭೇಟಿ: ಕೊರೋನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಆನಂದ ಸಿಂಗ್‌

ರೋಗಲಕ್ಷಣವಿಲ್ಲದ ಕಾರಣ ಆನಂದ್ ಸಿಂಗ್, ಹೊಸಪೇಟೆ ನಿವಾಸದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.  ತಮ್ಮ ಕಾರು ಚಾಲಕನಿಗೆ ಇತ್ತೀಚಿಗೆ ಸೋಂಕು ಪತ್ತೆಯಾದ ಹಿನ್ನೆಲೆ ಸಚಿವ ಆನಂದ್ ಸಿಂಗ್ ಅವರು ಹೋಂ ಕ್ವಾರಂಟೈನ್ ನಲ್ಲಿದ್ದರು. 

ಅಲ್ಲದೇ ಅವರು ಇತ್ತೀಚೆಗೆ ಬಳ್ಳಾರಿಯಲ್ಲಿ ಕೋವಿಡ್ ವಾರ್ಡ್ ಒಳಗೆ ಹೋಗಿ ಸೋಂಕಿತರ ಅಹವಾಲುಗಳನ್ನು ಆಲಿಸಿ, ಆತ್ಮಸ್ಥೈರ್ಯ ತುಂಬಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ