ಆಡಿಯೋದಲ್ಲಿ ಸ್ಪೀಕರ್ ಹೆಸ್ರು: ತನಿಖೆಯಾಗ್ಬೇಕು ಎಂದ ಸಿದ್ದರಾಮಯ್ಯ!

Published : Feb 11, 2019, 02:40 PM ISTUpdated : Feb 11, 2019, 02:43 PM IST
ಆಡಿಯೋದಲ್ಲಿ ಸ್ಪೀಕರ್ ಹೆಸ್ರು: ತನಿಖೆಯಾಗ್ಬೇಕು ಎಂದ ಸಿದ್ದರಾಮಯ್ಯ!

ಸಾರಾಂಶ

ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಆಪರೇಷನ್ ಕಮಲ ಆಡಿಯೋ; ಧ್ವನಿ ನ್ನನ್ನದು ಎಂದು ಒಪ್ಪಿಕೊಂಡ ಯಡಿಯೂರಪ್ಪ; ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಮಲದ ಆಡಿಯೋ ಭಾರೀ ಸದ್ದು ಮಾಡುತ್ತಿದೆ. ಈ ಆಡಿಯೋ ಬಗ್ಗೆ ತನಿಖೆಯಾಗಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಜೆಡಿಎಸ್ ಶಾಸಕನ ಪುತ್ರ ಶರಣುಗೌಡ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ಪನ್ನು ಕಳೆದ ಶುಕ್ರವಾರ ಬಜೆಟ್ ಮಂಡನೆಗೆ ಮುನ್ನ ಸಿಎಂ ಎಚ್ ಡಿ ಕುಮಾರಸ್ವಾಮಿ  ಬಿಡುಗಡೆ ಮಾಡಿದ್ದರು.

ಮೊದಲು ಆಪರೇಷನ್ ಕಮಲ, ಹಾಗೂ ಆಡಿಯೋ ಕ್ಲಿಪ್ ಆರೋಪಗಳನ್ನು ನಿರಾಕರಿಸಿದ್ದ ಯಡ್ಡಿಯೂರಪ್ಪ, ಅದು ಸತ್ಯವಾದಲ್ಲಿ ತಾನು ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಪ್ರತಿಕ್ರಿಯಿಸದ್ದರು.

ಭಾನುವಾರ ‘ಆಡಿಯೋ’ ರಾಜಕಾರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತಾನು ಶರಣುಗೌಡನ ಜೊತೆ ಮಾತನಾಡಿರುವುದು ಹೌದು ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದರು.ಆದರೆ ಆ ಆಡಿಯೋ ಕ್ಲಿಪ್ ಸಾಚಾವಲ್ಲ. ಅದನ್ನು ತಿರುಚಿ, ತಮಗೆ ಬೇಕಾದ ರೀತಿಯಲ್ಲಿ ಸಂಭಾಷಣೆಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದ್ದರು.

ಇದೀಗ ಆಪರೇಷನ್ ಕಮಲ  ಆಡಿಯೋ ಕ್ಲಿಪ್ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?