ಹುಬ್ಬಳ್ಳಿ ಗಲಭೆ ಪ್ರಕರಣ: ನನ್ನ ಮೇಲೆ ಯಾವ ಕೇಸಿತ್ತು, ತೆಗೀರಿ ಅಂದೋರು ಯಾರು? ಸಿಟಿ ರವಿ ಕಿಡಿ

Published : Oct 14, 2024, 06:13 PM IST
ಹುಬ್ಬಳ್ಳಿ ಗಲಭೆ ಪ್ರಕರಣ: ನನ್ನ ಮೇಲೆ ಯಾವ ಕೇಸಿತ್ತು, ತೆಗೀರಿ ಅಂದೋರು ಯಾರು? ಸಿಟಿ ರವಿ ಕಿಡಿ

ಸಾರಾಂಶ

ಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಚಿಕ್ಕಮಗಳೂರು (ಅ.14): ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಹುಬ್ಬಳ್ಳಿ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಹೀಗಾಗಿ ಕೇಸ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ಸಿಟಿ ರವಿ ಕೇಸ್ ಸಹ ವಾಪಸ್ ಪಡೆಯಲಾಗಿದೆ ಎಂದು ಹೇಳಿದೆ. ಈ ಬಗ್ಗೆ ಬಿಜೆಪಿ ಮಾಜಿ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, 'ನನ್ನ ಮೇಲೆ ಯಾವ ಕೇಸ್ ಇತ್ತು? ತೆಗೀರಿ ಅಂದೋರು ಯಾರು? ಯಾರು ಅರ್ಜಿ ಸಲ್ಲಿಸಿದ್ರು? ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕೋರ್ಟ್ ಅನುಮತಿಸಿದರಷ್ಟೇ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ಸಿದ್ದರಾಮಯ್ಯ

ಹೌದು. ಹುಬ್ಬಳ್ಳಿ ಗಲಭೆಯಲ್ಲಿನ ಆರೋಪಿಗಳನ್ನು ಬಿಡುಗಡೆಗೊಳಿಸಲು ಸಿಟಿ ಅವರ ಕೇಸ್ ಯಾಕೆ ವಾಪಸ್ ಪಡೆಯಬೇಕಾಗಿತ್ತು. ಅಷ್ಟಕ್ಕೂ ಸಿಟಿ ರವಿ ಮೇಲೆ ಇದ್ದ ಕೇಸ್ ಯಾವುದು? ಕೇಸ್ ವಾಪಸ್ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ? ಇಲ್ಲ,ಹಾಗಾದರೆ ಕೇಸ್ ವಾಪಸ್ ಪಡೆದಿದ್ದು ಹೇಗೆ? ಎಂಬುದು ಪ್ರಶ್ನೆಯಾಗಿದೆ.

ನನ್ನ ಮೇಲೆ ಯಾವ ಕೇಸ್ ಇತ್ತು?

ನನ್ನ ಮೇಲೆ ಯಾವುದೇ ಕೇಸ್ ಇಲ್ಲ. ಅಷ್ಟಕ್ಕೂ ನಾನು ಯಾವುದೇ ಕೇಸ್ ತೆಗೆಯಿರಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿಲ್ಲ, ಅರ್ಜಿ ಸಲ್ಲಿಕೆ ಮಾಡಿಲ್ಲ. ನನ್ನ ಮೇಲಿನ ಕೇಸ್ ಇದ್ದರೆ ತೆಗೆಯಿರಿ ಎಂದು ನಾನೂ ಹೇಳೋದಿಲ್ಲ. ಆ ಪರಿಸ್ಥಿತಿ ಬಂದರೆ ನ್ಯಾಯಾಲಯಕ್ಕೆ ಹೋಗಿ ಕಾನೂನು ಹೋರಾಟ ಮಾಡುತ್ತೇನೆ ಹೊರತು ಇವರ ಬಳಿ ಭಿಕ್ಷೆ ಬೇಡಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ರಾಷ್ಟ್ರದ್ರೋಹಿಗಳನ್ನು ರಕ್ಷಿಸುತ್ತಿದೆ: ಸಂಸದ ಕಾಗೇರಿ ಕಿಡಿ

ನಾನು ಯಾವ ಠಾಣೆಗೆ ಬೆಂಕಿ ಹಚ್ಚಿದ್ದೇನೆ, ಎಲ್ಲಿ ಕಲ್ಲು ಹೊಡೆದಿದ್ದೇನೆ ಕಾಂಗ್ರೆಸ್ ನಾಯಕರು ಹೇಳಲಿ. ಪೊಲೀಸರ ಮೇಲೆ ಹಲ್ಲೆ ಮಾಡಿ ಸ್ಟೇಷನ್ ಗೆ ಬೆಂಕಿ ಹಚ್ಚಿದ ದೇಶದ್ರೋಹಿ ಆರೋಪಿಗಳ ವಿರುದ್ಧದ ಪ್ರಕರಣ ರದ್ದು ಮಾಡುತ್ತಿದ್ದೀರಿ. ಈ ಪ್ರಕರಣದಲ್ಲಿ ಆಗಿನ ಪೊಲೀಸರೇ ಹೇಳುವಂತೆ ಸ್ವಲ್ಪ ತಡಮಾಡಿದ್ರೆ ಪೊಲೀಸರ ಹೆಣಗಳು ಬಿಳುತ್ತಿದ್ದವು. ಆ ರೀತಿ ಪೊಲೀಸರ ಮೇಲೆ ಕಲ್ಲು ತೂರಿದ್ದ ಮತಾಂಧರು.  ಹಿಂದೆ ಪಿಎಫ್‌ಐ ಕೇಸ್ ವಾಪಸ್ ಪಡೆದಿದ್ದಕ್ಕೆ ರಾಜು, ರುದ್ರೇಶ್ ಸೇರಿದಂತೆ 21 ಜನ ಹಿಂದೂಗಳ ಹತ್ಯೆ ಮಾಡಲಾಯಿತು. ಹಿಜಾಬ್ ಪರ ಹೋರಾಟ ಮಾಡಿ ರಾಜ್ಯಾದ್ಯಂತ ಘರ್ಷಣೆಗೆ ಕಾರಣರಾದ ಆರೋಪಿಗಳ ಕೇಸ್ ಸಹ ವಾಪಸ್ ಪಡೆದಿದ್ದೀರಿ, ಆದರೆ ಹಿಜಾಬ್ ವಿರುದ್ಧ ಹೋರಾಟ ಮಾಡಿದವರ ಕೇಸ್ ವಾಪಸ್ ಪಡೆದಿಲ್ಲ. ಟೋಪಿ ಹಾಕೋನು ಯಾರು ಅಂತೆಲ್ಲ ಗುರುತಿಸಿ ಕೆಲಸ ಮಾಡುತ್ತಿದ್ದೀರಿ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಜನಾಂದೋಲನ  ರೂಪಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ