ಸ್ಪರ್ಧಿಸಬೇಡಿ ಎಂದಿದ್ದು ನಿಜ, ಆದರೆ...: ಸೋಮಶೇಖರ್‌ಗೆ ವಿಶ್ವನಾಥ್‌ ತಿರುಗೇಟು!

Published : Jan 26, 2020, 11:43 AM IST
ಸ್ಪರ್ಧಿಸಬೇಡಿ ಎಂದಿದ್ದು ನಿಜ, ಆದರೆ...: ಸೋಮಶೇಖರ್‌ಗೆ ವಿಶ್ವನಾಥ್‌ ತಿರುಗೇಟು!

ಸಾರಾಂಶ

ಸ್ಪರ್ಧಿಸಬೇಡಿ ಎಂದಿದ್ದು ನಿಜ, ಆದರೆ ಕ್ಷೇತ್ರ ಬಿಟ್ಟು ಕೊಡಲು ಸಾಧ್ಯವೇ?| ಎಸ್‌.ಟಿ. ಸೋಮಶೇಖರ್‌ಗೆ ಎಚ್‌. ವಿಶ್ವನಾಥ್‌ ತಿರುಗೇಟು| ಬಿಎಸ್‌ವೈ ಮಾತು ತಪ್ಪುವುದಿಲ್ಲ, ಎಲ್ಲರಿಗೂ ಹುದ್ದೆ ಕೊಡ್ತಾರೆ

ಮೈಸೂರು[ಜ.26]: ಉಪಚುನಾವಣೆಯಲ್ಲಿ ಸೋಲುಂಡವರಿಗೆ ಈ ಹಿಂದೆಯೇ ಸ್ಪರ್ಧಿಸದಂತೆ ಹೇಳಲಾಗಿತ್ತು ಎಂಬ ಶಾಸಕ ಎಸ್‌.ಟಿ.ಸೋಮಶೇಖರ್‌ ಹೇಳಿಕೆಗೆ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಎಂದು ನನಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು ನಿಜ. ಆದರೆ ಕ್ಷೇತ್ರ ಬಿಟ್ಟುಕೊಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಸುತ್ತೂರಿನಲ್ಲಿ ಶನಿವಾರ ಮಾತನಾಡಿ, ನಾಲಿಗೆ ಮೇಲೆ ನಿಲ್ಲುವ ನಾಯಕ ಅಂದರೆ ಅದು ಬಿ.ಎಸ್‌. ಯಡಿಯೂರಪ್ಪ. ಅವರು ಎಂದಿಗೂ ಕೊಟ್ಟಮಾತು ತಪ್ಪುವುದಿಲ್ಲ. ಉಳಿಸಿಕೊಳ್ಳುತ್ತಾರೆ. ಸರ್ಕಾರ ರಚನೆಗೆ ಕಾರಣರಾದ ಎಲ್ಲರಿಗೂ ಸ್ಥಾನಮಾನ ಕೊಡುತ್ತಾರೆ ಎಂದರು.

‘ಯಡಿಯೂರಪ್ಪನವರು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ದು ನಿಜ. ಆದರೆ ಯಾರಾದರೂ ಕ್ಷೇತ್ರ ಬಿಟ್ಟು ಕೊಡುವರೇ? ನಾನು ಪಕ್ಷ ಸಂಘಟಿಸಿ, ಉಪ ಚುನಾವಣೆಯಲ್ಲಿ 52 ಸಾವಿರ ಮತ ಪಡೆದೆ. ಈ ಹಿಂದೆ ಎಸ್‌.ಟಿ. ಸೋಮಶೇಖರ್‌ ಮೈಸೂರಿಗೆ ಬಂದಾಗ ಎಚ್‌. ವಿಶ್ವನಾಥ್‌ ನಮ್ಮ ನಾಯಕ ಎಂದಿದ್ದರು. ಈಗ ನಾವು ಒಟ್ಟಾಗಿಯೇ ಇದ್ದೇವೆ. ಸೋಮಶೇಖರ್‌ ಹೇಳಿದಂತೆ ಒಟ್ಟಾಗಿರಬಾರದು ಎಂದೇನೂ ಇಲ್ಲವಲ್ಲ’ ಎಂದರು.

ಹುಣಸೂರಲ್ಲಿ ಬಿಜೆಪಿಗೆ ಅಸ್ತಿತ್ವವೇ ಇರಲಿಲ್ಲ. ಮೊದಲೆಲ್ಲ ಕ್ಷೇತ್ರದಲ್ಲಿ ಪಕ್ಷಕ್ಕೆ ಬರುವ ಮತಗಳು 5ರಿಂದ 6 ಸಾವಿರ ದಾಟುತ್ತಿರಲಿಲ್ಲ. ನಾನು ಸೋತಿರಬಹುದು. ಆದರೆ, 54 ಸಾವಿರ ಮತ ಪಡೆದಿದ್ದೇನೆ. ಅಲ್ಲಿ ಪಕ್ಷ ಬೆಳೆದಿದೆ ಇದನ್ನೂ ಗಮನಿಸಬೇಕು. ಹಾಗಾಗಿ ಇಲ್ಲಿ ಸೋಲು-ಗೆಲುವು ಮುಖ್ಯವಲ್ಲ. 17 ಮಂದಿಗೂ ಸ್ಥಾನಮಾನ ನೀಡಬೇಕು ಎಂದು ವಿಶ್ವನಾಥ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!