ಕೊರೋನಾ ಸೋಂಕಿನಿಂದ ಕರ್ನಾಟಕದ ಮಾಜಿ ಸಚಿವ ಸಾವು

Published : Jul 27, 2020, 03:38 PM ISTUpdated : Jul 27, 2020, 03:42 PM IST
ಕೊರೋನಾ ಸೋಂಕಿನಿಂದ ಕರ್ನಾಟಕದ ಮಾಜಿ ಸಚಿವ ಸಾವು

ಸಾರಾಂಶ

ಕೊರೋನಾ ಮಹಾಮಾರಿಯಿಂದ ಕರ್ನಾಟಕದ ಮಾಜಿ ಸಚಿವರೊಬ್ಬರು ಮರಣ ಹೊಂದಿದ್ದಾರೆ. ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಸೋಮವಾರ ಕೊನೆಯುಸಿರೆಳೆದಿದ್ದಾರೆ.

ಯಾದಗಿರಿ, (ಜುಲೈ.27): ಕೋವಿಡ್-19 ಸೋಂಕಿನಿಂದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ (70) ಅವರು ನಿಧನರಾಗಿದ್ದಾರೆ.

ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಮದನಗೋಪಾಲ ನಾಯಕ ಇಂದು (ಸೋಮವಾರ) ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುರಪುರದ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದೇ ಬಿಂಬಿತರಾಗಿದ್ದ ರಾಜಾ ಮದನಗೋಪಾಲ ನಾಯಕ ಅವರಿಗೆ ಕಳೆದ ಐದು ದಿನಗಳ ಹಿಂದೆ ಕೊವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಎಂದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಕಲಬುರಗಿಯಯ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ. 

ಕೊರೋನಾ ಗೆದ್ದು ಮನೆಗೆ ಬಂದಿದ್ದ ಬಿಜೆಪಿ ಹಿರಿಯ ಮುಖಂಡ ನಿಧನ: ಪ್ರಲ್ಹಾದ ಜೋಶಿ ಸಂತಾಪ

ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಚಿವ

1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು. ನಂತರ 1985ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು. 

ನಂತರ 1989ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ರಾಯಚೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ 501 ಮತಗಳ ಅಂತರದಿಂದ ಸೋಲುನುಭವಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!