ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ 10 ನಿರ್ದೇಶಕರನ್ನ ನೇಮಿಸಿದ ಸರ್ಕಾರ

Published : Nov 30, 2020, 10:17 PM IST
ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ 10 ನಿರ್ದೇಶಕರನ್ನ ನೇಮಿಸಿದ ಸರ್ಕಾರ

ಸಾರಾಂಶ

ಇತ್ತೀಚೆಗೆ ರಚನೆಯಾಗಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ನಿರ್ದೇಶಕರನ್ನು ನೇಮಕ ಮಾಡಿದೆ. ಅವರ ಹೆಸರುಗಳು ಈ ಕೆಳಗಿನಂತಿವೆ.

ಬೆಂಗಳೂರು, (ನ.30): ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಬೆನ್ನಲ್ಲೇ ಇದೀಗ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 10 ನಿರ್ದೇಶಕರನ್ನು ನೇಮಕ ಮಾಡಿ ಇಂದು (ಸೋಮವಾರ) ಆದೇಶಿಸಿದೆ. ಪರಮಶಿವಯ್ಯ ಅವರು ಅಧ್ಯಕ್ಷರಾಗಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷರ ನೇಮಕ

ನಿರ್ದೇಶಕರ ಹೆಸರುಗಳು
ವೀರಣ್ಣ ಚರಂತಿಮಠ, ಪ್ರಭಾಕರ ಕೋರೆ, ಹಾಲಪ್ಪ ಆಚಾರ್​, ಸೊಗಡು ಶಿವಣ್ಣ, ಶಂಕರ್​ ಮುನೇನಕೊಪ್ಪ ಪಾಟೀಲ್​, ಯು.ಬಿ.ಬಣಕಾರ, ಅರವಿಂದ ಬೆಲ್ಲದ, ಲಿಂಗಮೂರ್ತಿ, ಮಹಾಂತೇಶ್​ ಎಂ ಪಾಟೀಲ್​, ವಿಜಯಲಕ್ಷ್ಮಿ ಈಶ್ವರಪ್ಪ ಬಾಳೆಕುಂದ್ರಿ ಅವರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ. 

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ನವೆಂಬರ್​ 17ರಂದು ಸಿಎಂ ಬಿಎಸ್ ಯಡಿಯೂರಪ್ಪ  ಆದೇಶ ಹೊರಡಿಸಿದ್ದು. ಜೊತೆಗೆ ಕೊರೋನಾ ಆರ್ಥಿಕ ಸಂಕಷ್ಟದಲ್ಲೂ 500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Hate Speech Bill: ಒಬ್ಬ ವ್ಯಕ್ತಿಯ ಮಾತನ್ನು ದ್ವೇಷಭಾಷಣ ಅಂತ ಹೇಗೆ ಸಾಬೀತು ಮಾಡುತ್ತೀರಿ
Hate Speech Bill: ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು