ಸಂಪುಟ ವಿಸ್ತರಣೆ ಮೊದಲೇ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಿಸಿದ ಸರ್ಕಾರ

Published : Nov 24, 2020, 09:09 PM ISTUpdated : Nov 24, 2020, 09:16 PM IST
ಸಂಪುಟ ವಿಸ್ತರಣೆ ಮೊದಲೇ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಿಸಿದ ಸರ್ಕಾರ

ಸಾರಾಂಶ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸಭೆ ನಡೆಸಿದ ಬೆನ್ನಲ್ಲೇ ಇಂದು (ಮಂಗಳವಾರ) ರಾಜ್ಯ ಸರ್ಕಾ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನ ಭರ್ತಿ ಮಾಡಿದೆ

ಬೆಂಗಳೂರು, (ನ.24): ಹಲವು ದಿನಗಳಿಂದ ಬಾಕಿ ಉಳಿದಿರುವ ಸಂಪುಟ ಕಸರತ್ತು ಮುಂದುವರೆದಿದೆ. ಸಂಪುಟ ವಿಸ್ತರಣೆಯೋ ಅಥವಾ ಪುನರಚನೆಯೋ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ರಾಜ್ಯ ಸರ್ಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಿಸಿದೆ.

ಒಂದೆಡೆ ಸಂಪುಟ ಕಸರತ್ತು ಜೋರಾಗಿದ್ದು, ಆಕಾಂಕ್ಷಿಗಳು ಸಹ ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಿಎಂ ಬಿಎಸ್ ಯಡಿಯೂರಪ್ಪನವರನ್ನ ಭೇಟಿ ಮಾಡಿದ್ದು, ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಸಂಪುಟ ಕಸರತ್ತು ಮಧ್ಯೆಯೇ ಶಾಸಕ ಎಸ್.ಆರ್.ವಿಶ್ವನಾಥ್‌ಗೆ ಮಹತ್ವದ ಹುದ್ದೆ

ಇದರ ಬೆನ್ನಲ್ಲೇ ಇದೀಗ ಸಿಎಂ ಬಿಎಸ್ ಯಡಿಯೂರಪ್ಪನವರು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಿಸಿ ಆದೇಶ ಹೊರಡಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ನಿಗಮ ಮಂಡಳಿಗಳ ನೂತನ ಅಧ್ಯಕ್ಷರು
* ಬಿ.ಎಸ್. ಪರಮಶಿವಯ್ಯ - ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
* ಎಸ್​.ಆರ್​.ವಿಶ್ವನಾಥ - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
* ಚಂದು ಪಾಟೀಲ್​ - ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿ
* ಬಿ.ಸಿ.ನಾಗೇಶ್​ - ಕಾರ್ಮಿಕ ಕಲ್ಯಾಣ ಮಂಡಳಿ
* ಬಿ.ಕೆ. ಮಂಜುನಾಥ್​​​ - ನಾರು ಅಭಿವೃದ್ಧಿ ಮಂಡಳಿ
* ಸವಿತಾ ವಿಶ್ವನಾಥ್ ಅಮರ್ ಶೆಟ್ಟಿ - ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
* ಕಿರಣ್ ಕುಮಾರ್​ - ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
* ತಾರಾ ಅನುರಾಧ - ಅರಣ್ಯ ಅಭಿವೃದ್ಧಿ ‌ನಿಗಮ
* ಎಸ್.ಆರ್.ಗೌಡ - ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
* ಕೆ.ವಿ. ನಾಗರಾಜ್​​ - ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
* ತಿಪ್ಪೇಸ್ವಾಮಿ - ಕಾಡಾ ನಿಗಮ
* ರಘು ಆರ್​ - ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
* ಬಾಬು ಪತ್ತಾರ್​ - ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
* ಜೆ.ಕೆ ಗಿರೀಶ್​ ಉಪ್ಪಾರ್​ - ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ
* ಎಸ್​ ನರೇಶ್​ ಕುಮಾರ್​ - ಸವಿತಾ ಸಮುದಾಯ ಅಭಿವೃದ್ಧಿ ನಿಗಮ
* ತಮ್ಮೇಶ ಗೌಡ ಎಚ್​.ಸಿ - ಕರ್ನಾಟಕ ವಿದ್ಯುತ್​ ಕಾರ್ಖಾನೆ ನಿಯಮಿತ
* ದುರ್ಯೋಧನ ಮಹಲಿಂಗಪ್ಪ - ಡಾ.ಬಿ.ಆರ್​.ಅಬೇಂಡ್ಕರ್​ ನಿಗಮ ನಿಯಮಿತ
* ಎಚ್​. ಹನುಮಂತಪ್ಪ - ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
* ಎಂ ರಾಮಚಂದ್ರ - ಕೇಂದ್ರ ಪರಿಹಾರ ಸಮಿತಿ
* ಸಿ. ಮುನಿಕೃಷ್ಣ - ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ
* ಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು - ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ
* ಲಿಂಗರೆಡ್ಡಿ ಬಿ.ಎನ್​. ಗುರುಂಡಗೌಡ ಬಾಸರೆಟ್ಟಿ - ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ
* ವಿಜುಗೌಡ ಎಸ್​ ಪಾಟೀಲ್​ - ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ