ರಾಜ್ಯದಲ್ಲಿ ನಡೆಯಬೇಕಿದ್ದ ವಿಧಾನಪರಿಷತ್ ಚುನಾವಣೆ ಮುಂದೂಡಿಕೆ...!

Published : Jun 08, 2020, 10:05 PM ISTUpdated : Jun 08, 2020, 10:07 PM IST
ರಾಜ್ಯದಲ್ಲಿ ನಡೆಯಬೇಕಿದ್ದ ವಿಧಾನಪರಿಷತ್ ಚುನಾವಣೆ ಮುಂದೂಡಿಕೆ...!

ಸಾರಾಂಶ

ಗ್ರಾಮ ಪಂಚಾಯಿತಿ ಬಳಿಕ ಇದೀಗ ವಿಧಾನಪರಿಷತ್ ಎಲೆಕ್ಷನ್‌ಗಳನ್ನು ಸಹ ರಾಜ್ಯ ಚುನಾವಣೆ ಆಯೋಗ ಮುಂದೂಡಿದೆ.

ಬೆಂಗಳೂರು, (ಜೂನ್.08): ರಾಜ್ಯದಲ್ಲಿ ಮೆಲ್ಮನೆಗೆ ನಡೆಯಬೇಕಿದ್ದ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ತಲಾ ಎರಡು ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ.

 ಕೋವಿಡ್ 19 ಸೋಂಕಿನ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಮತ್ತು ಸದ್ಯದ ಪರಿಸ್ಥಿತಿಯಲ್ಲಿ ಮತದಾರರ ಭಾಗೀದಾರಿಕೆಯಲ್ಲಿ ಚುನಾವಣೆಗಳನ್ನು ನಡೆಸುವುದು ಅಸಾಧ್ಯವಾಗಿರುವ ಕಾರಣದಿಂದ ರಾಜ್ಯ ಚುನಾವಣೆ ಆಯೋಗ ನಾಲ್ಕು ಪರಿಷತ್ ಚುನಾವಣೆಯನ್ನು ಮುಂದೂಡಿದೆ.

ಗ್ರಾಮ ಪಂಚಾಯಿತಿ ಎಲೆಕ್ಷನ್: ಪಕ್ಷಗಳ ಗಲಾಟೆ ಮಧ್ಯೆ ಚುನಾವಣೆ ಆಯೋಗದಿಂದ ಪ್ರಕಟಣೆ

ಮೆಲ್ಮನೆಗೆ ನಡೆಯಬೇಕಿದ್ದ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ತಲಾ ಎರಡು ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ.

ರಾಜ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿನ ತಲಾ ಎರಡು ಸ್ಥಾನಗಳ ಅವಧಿ ಇದೇ  ಜೂನ್ 30ಕ್ಕೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಖಾಲಿ ಸ್ಥಾನಗಳಿಗೆ ಚುನಾವಣೆ ನಡೆಸಬೇಕಿತ್ತು.

ಆದರೆ ಕೋವಿಡ್ ಸೋಂಕಿನ ಬಾಧೆ ಜೋರಾಗಿರುವುದರಿಂದ ಮತ್ತು ಪೂರ್ವಭಾವಿ ಹಾಗೂ ಚುನಾವಣಾ ತಯಾರಿಗಳನ್ನು ನಡೆಸುವುದು ಅಸಾಧ್ಯವೆಂದು ಕಂಡುಬಂದಿರುವ ಕಾರಣದಿಂದ ಹಾಗೂ ಲಾಕ್ ಡೌನ್ ಸಂಬಂಧಿತವಾಗಿ ಕೇಂದ್ರ ಗೃಹ ಇಲಾಖೆಯ ಮಾರ್ಗದರ್ಶಿ ನಿಯಮಗಳು ಜಾರಿಯಲ್ಲಿರುವುದನ್ನು ಮನಗಂಡು ಚುನಾವಣಾ ಆಯೋಗವು  ನಾಲ್ಕು ಕ್ಷೇತ್ರಗಳ ಚುನಾವಣೆಯನ್ನು ಅನಿರ್ಧಾಷ್ಟವಧಿಗೆ ಮುಂದೂಡಿ ಆದೇಶವನ್ನು ಹೊರಡಿಸಿದೆ.

ಇನ್ನು ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಸಹ ಮುಂದೂಡಿರುವುದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ