ಮಾನನಷ್ಟ ಪ್ರಕರಣ: ಕೋರ್ಟ್‌ನಲ್ಲಿ ದೇವೇಗೌಡರಿಗೆ ಹಿನ್ನಡೆ

Published : Jan 17, 2021, 10:23 PM IST
ಮಾನನಷ್ಟ ಪ್ರಕರಣ: ಕೋರ್ಟ್‌ನಲ್ಲಿ ದೇವೇಗೌಡರಿಗೆ ಹಿನ್ನಡೆ

ಸಾರಾಂಶ

ಮಾನನಷ್ಟ ಪ್ರಕರಣ ಒಂದರಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಹಿನ್ನಡೆಯಾಗಿದೆ. ಏನಿದು ಪ್ರಕರಣ?

ಬೆಂಗಳೂರು, (ಜ.17): 10 ಕೋಟಿ ರೂ. ಮಾನನಷ್ಟ ಪ್ರಕರಣದ ರಿಟ್‌ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡಗೆ ಹಿನ್ನಡೆಯಾಗಿದೆ.

ರಿಟ್ ಅರ್ಜಿ ವಜಾಗೊಳಿಸಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ತೀರ್ಪು ನೀಡಿದೆ. ಇದಲ್ಲದೆ, 9 ತಿಂಗಳಲ್ಲಿ ಪ್ರಕರಣ ಇತ್ಯರ್ಥ ಪಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ಸಹ ನೀಡಿದೆ.

ಲೋಕಸಭೆ ಸೋಲು ನೆನೆದು ನಿಖಿಲ್ ಕುಮಾರಸ್ವಾಮಿ ಭಾವುಕ

ಏನಿದು ಪ್ರಕರಣ?
2012ರಲ್ಲಿ ದೇವೇಗೌಡರ ವಿರುದ್ಧ ನೈಸ್ ಸಂಸ್ಥೆ ವಿಚಾರಣಾ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಅಲ್ಲದೇ ನೈಸ್‌ ಸಂಸ್ಥೆ 10 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ಸಹ ಕೋರಿತ್ತು.

ಆರೋಪ ಸಮರ್ಥನೆಗೆ ಸಾಕ್ಷ್ಯ ಒದಗಿಸಲು ಕೋರ್ಟ್​ ಅವಕಾಶ ನೀಡಿತ್ತು. ಹಲವು ಅವಕಾಶ ನೀಡಿದ್ರೂ ಸಾಕ್ಷ್ಯ ವಿಚಾರಣೆ ನಡೆಸದ ಹಿನ್ನೆಲೆಯಲ್ಲಿ H.D.ದೇವೇಗೌಡರ ಸಾಕ್ಷ್ಯವನ್ನು ಮುಕ್ತಾಯಗೊಳಿಸಲಾಗಿತ್ತು.

ಹೀಗಾಗಿ, ಪ್ರತಿವಾದಿ ಸಾಕ್ಷ್ಯ ವಿಚಾರಣೆಗೆ ಅವಕಾಶ ಕೋರಿ ದೇವೇಗೌಡರು ಹೈಕೋರ್ಟ್​ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಇವರ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ