ಮಂಗಳೂರು ಚೂರಿ ಇರಿತ ಪ್ರಕರಣ: 'ಯಾರೇ ಆಗಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ' - ದಿನೇಶ್ ಗುಂಡೂರಾವ್

Published : Jun 10, 2024, 07:00 PM ISTUpdated : Jun 11, 2024, 11:36 AM IST
ಮಂಗಳೂರು ಚೂರಿ ಇರಿತ ಪ್ರಕರಣ: 'ಯಾರೇ ಆಗಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ' - ದಿನೇಶ್ ಗುಂಡೂರಾವ್

ಸಾರಾಂಶ

ವಿಧಾನ ಪರಿಷತ್‌ನಲ್ಲಿ ನಾವೇ ಗೆಲ್ತೀವಿ ಎಂದು ಹೇಳಿರಲಿಲ್ಲ. ಗೆಲುವು ಕಷ್ಟ ಎಂದು ನಮಗೆ ಮೊದಲೇ ಗೊತ್ತಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.

ಮಂಗಳೂರು (ಜೂ.10) ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಈಗಾಗಲೇ ಮೂರು ನಾಲ್ಕು ಜನರ ಬಂಧನವಾಗಿದೆ. ಕಾನೂನು ಪ್ರಕಾರ ಆಗುವಾಗ ನಮ್ಮ ಹಸ್ತಕ್ಷೇಪವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಚೂರಿ ಇರಿದ ಪ್ರಕರಣದಲ್ಲಿ ಅಂಥವರು ಇಂಥವರು ಎಂಬುದೇನೂ ಇಲ್ಲ. ಯಾರೇ ತಪ್ಪು ಮಾಡಿದ್ರೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮವಾಗುತ್ತದೆ. ಘಟನೆಗೆ ಕಾರಣ ಏನು ಇರಬಹುದು, ಕಾನೂನು ಕೈಗೆ ತೆಗೆದುಕೊಂಡಾಗ ಕ್ಷಮಿಸೋದಕ್ಕೆ ಆಗೋದಿಲ್ಲ. ಈ ಪ್ರಕರಣದಲ್ಲಿ ಕೆಲವರು ಪ್ರಚೋದನೆ ಮಾಡಿರಬಹುದು, ಆದರೆ ಸಂಯಮ ಕಾಪಾಡೋದು ನಮ್ಮ ಜವಾಬ್ದಾರಿಯೂ ಹೌದು. ಕಾನೂನು ಕೈಗೆತ್ತಿಕೊಂಡರೆ ಕ್ರಮ ಆಗಲೇಬೇಕು. ಇಂತಹ ಘಟನೆ ಆದಾಗ ಸರ್ಕಾರ, ರಾಜಕಾರಣಿಗಳು ತಟಸ್ಥರಾಗಬೇಕು ಎಂದರು.

'ನಾವು ನಮ್ಮಪ್ಪನ ಮಕ್ಕಳು ಭಯದಿಂದ ಬದುಕಿದವರು..' ವಿರೋಧಿಗಳ ಟೀಕೆಗೆ ನಟ ಶಿವರಾಜ್ ಕುಮಾರ್ ತಿರುಗೇಟು!

ಇನ್ನು ದಕ್ಷಿಣ ಕನ್ನಡ ಅಭ್ಯರ್ಥಿ ಸೋಲಿನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ವಿಧಾನ ಪರಿಷತ್‌ನಲ್ಲಿ ನಾವೇ ಗೆಲ್ತೀವಿ ಎಂದು ಹೇಳಿರಲಿಲ್ಲ. ಗೆಲುವು ಕಷ್ಟ ಎಂದು ನಮಗೆ ಮೊದಲೇ ಗೊತ್ತಿತ್ತು. ನಾವಿಲ್ಲಿ ನೂರಕ್ಕೆ ನೂರು ಗೆಲ್ತಿವಿ ಎಂದು ಹೇಳಿರಲಿಲ್ಲ. ಕರಾವಳಿ ಪ್ರದೇಶ, ಉಡುಪಿ ,ಉತ್ತರ ಕನ್ನಡಲ್ಲಿ ಪರಿಸ್ಥಿತಿಯ ಅರಿವಿದೆ. ನಮ್ಮ ಅಭ್ಯರ್ಥಿ ಪದ್ಮರಾಜ್ ಅವರು ಶ್ರಮ ಪಟ್ಟಿದ್ದಾರೆ. ಅದೇ ರೀತಿ ಲೋಕ ಸಭೆಯಲ್ಲಿ ನಮ್ಮ ಪಕ್ಷ ಸೋತರೂ ಈ ಬಾರಿ ಸೋಲಿನ ಅಂತರ ಕಡಿಮೆಯಾಗಿದೆ ಎಂದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿಯವರಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ. ಅವರು ಸರ್ವಾಧಿಕಾರಿ ರೀತಿ ಹೋಗುತ್ತೀವಿ  ಅಂದಿದ್ದಕ್ಕೆ ಕಡಿವಾಣ ಬಿದ್ದಿದೆ. ನಿಮ್ಮ ಸರ್ವಾಧಿಕಾರಿ ಧೋರಣೆ ಅನುಸರಿಸೋದಕ್ಕೆ ಆಗೋದಿಲ್ಲ.  ಪ್ರಜಾಪ್ರಭುತ್ವ ಉಳಿಸುವ ಫಲಿತಾಂಶ ದೇಶದ ಜನರು ಕೊಟ್ಟಿದ್ದಾರೆ. ನಮ್ಮ ಪ್ರಧಾನಿ ಅವರೇ ಭಗವಂತ ಎಂದು ಹೇಳಿದ್ರು. ಇದೀಗ ಚುನಾವಣೆ ಫಲಿತಾಂಶ ಬಳಿಕ ಸಾಮಾನ್ಯ ಮನುಷ್ಯರಾಗಿದ್ದಾರೆ. ಎಲ್ಲರಿಗೂ ತಗ್ಗಿ ಬಗ್ಗಿ ಹೋಗುವ ಪರಿಸ್ಥಿತಿ ಬಂದಿದೆ. ಇದರಿಂದ ನಮ್ಮ ದೇಶಕ್ಕೆ, ವ್ಯವಸ್ಥೆಗೆ ಒಳ್ಳೇದಾಗಿದೆ ಎಂದರು.

ಸೋತಿದ್ದೇವೆಂದು ಟಾಟಾ ಬೈಬೈ ಹೇಳೊಲ್ಲ, ಇಲ್ಲಿಯೇ ಇರುತ್ತೇವೆ: ಗೀತಾ ಶಿವರಾಜ್ ಕುಮಾರ್

ಎಲ್ಲ ಅಡೆತಡೆಗಳನ್ನ ಎದುರಿಸಿ ನೂರಕ್ಕೆ ಬಂದಿದ್ದೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ಸಚಿವರುಗಳ ಕ್ಷೇತ್ರದಲ್ಲೇ ಪಕ್ಷಕ್ಕೆ ಸೋಲಾಗಿದೆ. ಈ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ. ಪಕ್ಷದ ಹಿತದೃಷ್ಟಿಯಿಂದ ಏನೇನು ಮಾಡಬೇಕು ಅದನ್ನೆಲ್ಲ ವರಿಷ್ಠರು ಮಾಡಲಿದ್ದಾರೆ. ನಾವು ಕೂಡ ತಯಾರಾಗಿದ್ದದೇವೆ. ಪಕ್ಷಕ್ಕೆ ಎಲ್ಲರೂ ಮುಖ್ಯವೇ ಆದರೆ ಯಾರೂ ಅನಿವಾರ್ಯವಲ್ಲ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆಲ್ಲೋದಕ್ಕೆ ಕೋಮುವಾದ ಕಾರಣ. ನಮ್ಮ ಅಭ್ಯರ್ಥಿ ಸೋತರೂ ಎಲ್ಲರನ್ನೂ ಸೇರಿಸಿಕೊಂಡು ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್