
ಬೆಂಗಳೂರು, (ಅ.21): ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಅನುಮತಿ ಕೊಟ್ಟಿದ್ದು, ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಗೆ ಹೈಕೋರ್ಟ್ ಮತ್ತೆ ತಡೆ
ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಿದರು. ಬಳಿಕ ವಿಭಾಗೀಯ ಪೀಠ ಸರ್ಕಾರದ ಮೇಲ್ಮನವಿಯನ್ನು ಅಂಗೀಕರಿಸಿದ್ದು, ತಡೆಯಾಜ್ಞೆ ತೆರವುಗೊಳಿಸಿದೆ, ಇದರಿಂದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ರಿಲೀಫ್ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.