
ಬೆಂಗಳೂರು, (ನ.30): ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇದರಿಂದ ಮಂತ್ರಿಗಿರಿ ಕನಸು ಕಾಣುತ್ತಿದ್ದ ಹಳ್ಳಿಹಕ್ಕಿ ಕನಸಿಗೆ ತಣ್ಣೀರು ಎರಚಿದಂತಾಗಿದೆ.
ಸಂವಿಧಾನದ ಆರ್ಟಿಕಲ್ 164 (1B), 361 B ಅಡಿ ವಿಶ್ವನಾಥ್ ಅವರು ಅನರ್ಹ ಎಂದು ಇಂದು (ಸೋಮವಾರ) ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಎಚ್ ವಿಶ್ವನಾಥ್ ವಿಧಾನ ಪರಿಷತ್ಗೆ ನಾಮನಿರ್ದೇಶನ: ಸರ್ಕಾರಕ್ಕೆ ಕೋರ್ಟ್ ನೋಟಿಸ್
ಇನ್ನು ಆರ್. ಶಂಕರ್, ಎಂಟಿಬಿ ನಾಗರಾಜ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಂವಿಧಾನದಡಿ ಮರುಆಯ್ಕೆ ಆಗಿರುವುದರಿಂದ ಅನರ್ಹತೆಯಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
ಆರ್.ಶಂಕರ್ ಹಾಗೂ ಎಂಟಿಬಿ ನಾಗರಾಜ್ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದ್ರೆ, ವಿಶ್ವನಾಥ್ ಅವರು ವಿಧಾನಪರಿಷತ್ಗೆ ನಾಮನಿರ್ದೇಶನಗೊಂಡಿದ್ದರು.
ಪ್ರಕರಣದ ಹಿನ್ನೆಲೆ
ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡದಂತೆ ಕೋರಿ ವಕೀಲ ಎ.ಎಸ್. ಹರೀಶ್ ಪಿಐಎಲ್ ಸಲ್ಲಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸಿದ್ದರು. ಎಚ್.ವಿಶ್ವನಾಥ್, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ಜನರಿಂದ ನೇರವಾಗಿ ಆಯ್ಕೆಯಾಗಿಲ್ಲ. ಎಚ್. ವಿಶ್ವನಾಥ್ ನಾಮನಿರ್ದೇಶಿತ ಶಾಸಕರಾಗಿದ್ದಾರೆ. ಅನರ್ಹರಾದವರು ಹಿಂಬಾಗಿಲಿನಿಂದ ಶಾಸಕರಾಗುವಂತಿಲ್ಲ. ಅನರ್ಹರಾದವರು ಮರು ಆಯ್ಕೆಯಾಗಲಷ್ಟೇ ಅವಕಾಶವಿದೆ. ಹೀಗಾಗಿ ಸಚಿವರಾಗಿಸದಂತೆ ತಡೆಯಾಜ್ಞೆ ನೀಡಲು ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.