
ಬೆಂಗಳೂರು, (ಡಿ.04): ಬಿಬಿಎಂಪಿ ಚುನಾವಣೆ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು (ಶುಕ್ರವಾರ) ತೀರ್ಪು ಪ್ರಕಟಿಸಿದ್ದು, ಸಾಧ್ಯವಾದಷ್ಟು ಬೇಗ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಇಂದಿನಿಂದ 6 ವಾರಗಳಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಿದೆ.
ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಕಟ: ಯಾರಿಗೆ ಯಾವ ವಾರ್ಡ್ ಮೀಸಲು..?
ಇಂದಿನಿಂದ 6 ವಾರ ಚುನಾವಣೆ ಘೋಷಣೆಗೆ ಕಾಲಾವಕಾಶ ನೀಡಲಾಗುವುದು. ಎಷ್ಟು ಬೇಗ ಸಾಧ್ಯವೋ ಅಷ್ಟೂ ಬೇಗ ಚುನಾವಣೆ ನಡೆಸಬೇಕು. ಒಂದು ತಿಂಗಳಲ್ಲಿ ಮಿಸಲಾತಿ ಅಧಿಸೂಚನೆ ಹೊರಡಿಸಿ. ಮೀಸಲಾತಿ ಆದೇಶ ಹೊರಡಿಸಿದ 6 ವಾರದಲ್ಲಿ ಎಲೆಕ್ಷನ್ ನಡೆಯಬೇಕು. ನಗರದಲ್ಲಿರುವ 198 ವಾರ್ಡ್ಗೆ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಬಿಬಿಎಂಪಿ ಚುನಾವಣೆ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನ ಹೈಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.