
ಬೆಂಗಳೂರು, (ನ.13): ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ರಾಜ್ಯ ಉಚ್ಛ ನ್ಯಾಯಾಲಯವು ಅನುಮತಿ ನೀಡಿದ್ದು, 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್ಗೆ ಸಲ್ಲಿಸಲಾಗಿತ್ತು.
ಗ್ರಾಮ ಪಂಚಾಯತಿ ಚುನಾವಣೆ: ಕಂದಾಯ ಇಲಾಖೆಗೆ ಚುನಾವಣಾ ಆಯೋಗ ಮಹತ್ವದ ಸೂಚನೆ
ಇದನ್ನ ವಿಚಾರಣೆ ನಡೆಸಿದ ಹೈಕೋರ್ಟ್, ಎಲೆಕ್ಷನ್ ಘೋಷಣೆ ಬಗ್ಗೆ 3 ವಾರದಲ್ಲಿ ಆಯೋಗ ತೀರ್ಮಾನಿಸಬೇಕು. ಆಯೋಗ ಸರ್ಕಾರ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬಹುದು. ಚುನಾವಣೆಗೆ ಹಣಕಾಸಿನ ಅಗತ್ಯವಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ,
ಅಸಾಧಾರಣ ಸಂದರ್ಭದಲ್ಲಷ್ಟೇ ಚುನಾವಣೆ ಮುಂದೂಡಬಹುದು. ಆ ಅಸಾಧಾರಣ ಸಂದರ್ಭವನ್ನು ಆಯೋಗ ತೀರ್ಮಾನಿಸಬೇಕು. ಚುನಾವಣೆ ಮುಂದೂಡಿಕೆ ಸರ್ಕಾರ ನಿರ್ಧರಿಸುವಂತಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಅಶೋಕ್ ಎಸ್. ಕಿಣಗಿರವರಿದ್ದ ಪೀಠ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.