
ಬೆಂಗಳೂರು, (ಅ.15): ಮೊನ್ನೇ ಅಷ್ಟೇ ಪ್ರಕಟವಾಗಿದ್ದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತ್ವರಿತವಾಗಿ ಎಲೆಕ್ಷನ್: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಮಾರ್ಗಸೂಚಿ ಪ್ರಕಟ
ಮೀಸಲಾತಿ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ಅಕ್ಟೋಬರ್ 22 ರಂದು ವರದಿ ನೀಡಲು ಸೂಚಿಸಲಾಗಿದೆ. ಹಾಸನ, ಅರಸೀಕೆರೆಯ ಮೀಸಲಾತಿಯನ್ನು ಪ್ರಶ್ನಿಸಲಾಗಿತ್ತು. ಎಸ್.ಟಿ.ಗೆ ಮೀಸಲಾತಿ ನಿಗದಿಪಡಿಸಿರುವುದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಮಧ್ಯಂತರ ತಡೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.