
ಬೆಂಗಳೂರು : ಬಿಹಾರ ಚುನಾವಣೆ ನಿರ್ವಹಣೆ ಹೊಣೆಗಾರಿಕೆಯಲ್ಲದೆ, ಕೆಲ ಸಚಿವರು ಖುದ್ದಾಗಿ ಬಿಹಾರಕ್ಕೆ ತೆರಳಿ ಚುನಾವಣಾ ಉಸ್ತುವಾರಿ ವಹಿಸಿಕೊಳ್ಳುವ ಸಾಧ್ಯತೆಗಳಿವೆ.
ಸೋಮವಾರ ಸಚಿವರಿಗೆ ನೀಡಿದ ಔತಣ ಕೂಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ನೀಡಿರುವ ಕೆಲ ಸೂಚನೆಗಳನ್ನು ವಿವರಿಸಿ, ಕೆಲ ಪ್ರಭಾವಿ ಸಚಿವರು ನೇರವಾಗಿ ಬಿಹಾರಕ್ಕೆ ತೆರಳಿ ಪಕ್ಷದ ಕೆಲಸದಲ್ಲಿ ತೊಡಗಿಕೊಳ್ಳಬೇಕಾಗುತ್ತದೆ ಎಂದು ಸೂಚಿಸಿದರು ಎನ್ನಲಾಗಿದೆ. ಪಕ್ಷಕ್ಕೆ ಬಿಹಾರ ಚುನಾವಣೆ ಮಹತ್ವದ್ದಾಗಿದ್ದು, ಪಕ್ಷ ಸ್ಪರ್ಧಿಸುತ್ತಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ನೀವೂ ಸಹ ಕೃಷಿ ಮಾಡಬೇಕು. ಇದಕ್ಕಾಗಿ ಪಕ್ಷ ನೀಡುವ ಎಲ್ಲಾ ರೀತಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಸೂಚಿಸಿದರು ಎನ್ನಲಾಗಿದೆ.
ಸಚಿವರ ಜತೆ ಸಿಎಂ
ಪ್ರತ್ಯೇಕ ಮಾತುಕತೆ
ಔತಣಕೂಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಬ್ಬ ಸಚಿವರೊಂದಿಗೆ ಪ್ರತ್ಯೇಕವಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಇಲಾಖೆಯ ವಿಚಾರಗಳು ಮಾತ್ರವಲ್ಲದೆ, ಸಂಪುಟ ಪುನಾರಚನೆ ಹಾಗೂ ಬಿಹಾರ ಚುನಾವಣೆ ಸಂಬಂಧವೂ ಕೆಲ ಸೂಚನೆಗಳನ್ನು ನೀಡಿದರು ಎಂದು ಮೂಲಗಳು ಹೇಳಿವೆ.
ಐದು ಸಚಿವರು ಗೈರು
ಈ ಸಭೆಗೆ ಸಚಿವರಾದ ಜಮೀರ್ ಅಹಮದ್ಖಾನ್, ಬೋಸರಾಜು, ಸತೀಶ್ ಜಾರಕಿಹೊಳಿ, ಲಕ್ಷ್ಮೀಹೆಬ್ಬಾಳ್ಕರ್, ಮಂಕಾಳವೈದ್ಯ ಅವರು ಪೂರ್ವಾನುಮತಿ ಪಡೆದು ಗೈರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.