ಮೈತ್ರಿಗೆ ಮೊದಲ ಶಾಕ್: ಜೆಡಿಎಸ್- ಕಾಂಗ್ರೆಸ್ ಸರ್ಕಾರಕ್ಕೆ ಪಕ್ಷೇತರರ ಗುನ್ನ..!

Published : Jan 14, 2019, 04:10 PM ISTUpdated : Jan 14, 2019, 05:23 PM IST
ಮೈತ್ರಿಗೆ ಮೊದಲ ಶಾಕ್: ಜೆಡಿಎಸ್- ಕಾಂಗ್ರೆಸ್ ಸರ್ಕಾರಕ್ಕೆ ಪಕ್ಷೇತರರ ಗುನ್ನ..!

ಸಾರಾಂಶ

ಮೈತ್ರಿ ಸರ್ಕಾರಕ್ಕೆ ಮೊದಲ ಶಾಕ್..! ಜೆಡಿಎಸ್- ಕಾಂಗ್ರೆಸ್ ಸರ್ಕಾರಕ್ಕೆ ಪಕ್ಷೇತರರ ಗುನ್ನ..! ಇದ್ರಿಂದ ರಾಜ್ಯ ಮೈತ್ರಿ ಸರ್ಕಾರಕ್ಕೆ ತಳಮಳ ಶುರುವಾಗಿದೆ.

ಬೆಂಗಳೂರು, (ಜ.14): ಕಾಂಗ್ರೆಸ್ ನ ಕೆಲ ಅತೃಪ್ತ ಶಾಸಕರ ನಡೆಯಿಂದಾಗಿ ರಾಜ್ಯ ಮೈತ್ರಿ ಸರ್ಕಾರ ಅಡ್ಡಕತ್ತರೆಯಲ್ಲಿ ಸಿಲುಕಿದೆ.ಸಚಿವ ಸ್ಥಾನ ವಂಚಿತ ಕೆಲ ಶಾಸಕರು ಕಾಂಗ್ರೆಸ್ ವಿರುದ್ಧ ಸಿಡಿದೆದಿದ್ದು, ನಾಯಕರ ಸಂಪರ್ಕಕ್ಕೆ ಸಿಗದೇ ಅಜ್ಞಾತ ಸ್ಥಳದಲ್ಲಿದ್ದಾರೆ.

"

ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದ ಸಚಿವ ಸ್ಥಾನ ವಂಚಿತ ಇಬ್ಬರು ಪಕ್ಷೇತರ ಶಾಸಕರು ತಮ್ಮ ಬೆಂಬಲವನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ.

ಅಖಾಡಕ್ಕಿಳಿದ ಡಿ.ಕೆ.ಶಿವಕುಮಾರ್: ಮುಂಬೈನತ್ತ ಕಾಂಗ್ರೆಸ್ ಟ್ರಬಲ್ ಶೂಟರ್

ರಾಣೇಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್ ಹಾಗೂ ಮುಳಬಾಗಿಲು ಪಕ್ಷೇತರ ಶಾಸಕ ನಾಗೇಶ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯಲು ನಿರ್ಧರಿಸಿದ್ದು, ಕುಮಾರಸ್ವಾಮಿ ಸರ್ಕಾರಕ್ಕೆ ನಿದ್ದೆಗೆಡಿಸಿದೆ.

ಇನ್ನು ಕೆಲ ಅತೃಪ್ತ ಕಾಂಗ್ರೆಸ್ ಶಾಸಕರು ಮುಂಬೈನಲ್ಲಿ ಕೂತು ಮೈತ್ರಿ ಸರ್ಕಾರವನ್ನು ಆಟವಾಡಿಸುತ್ತಿದ್ದಾರೆ. ಇದ್ರಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿದೆ.

ಇದೀಗ ಅತೃಪ್ತರನ್ನು ಮನವೊಲಿಸುವ ಹೊಣೆಯನ್ನು ಹೊತ್ತುಕೊಂಡಿರುವ ಕಾಂಗ್ರೆಸ್ ಟ್ರಬಲ್ ಶೂಟರ್ ಸಚಿವ ಡಿ.ಕೆ. ಶಿವಕುಮಾರ್ ಅಖಾಡಕ್ಕಿಳಿದಿದ್ದು, ನಾಳೆ (ಮಂಗಳವಾರ) ಮುಂಬೈಗೆ ಹೋಗಲಿದ್ದಾರೆ.

ಸೆಮಿನರ್ ನೆಪದಲ್ಲಿ ಮೂರು ದಿನ ಮುಂಬೈನಲ್ಲಿ ವಾಸ್ತವ್ಯ ಹೂಡಲಿರುವ ಡಿಕೆಶಿ, ಅತೃಪ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ