ದಕ್ಷಿಣ ಕನ್ನಡ 2024 Elections ಸಂಜೆ 5ಗಂಟೆ ವೇಳೆಗೆ ಶೇ.71.83ರಷ್ಟು ಮತದಾನ

Published : Apr 26, 2024, 10:18 AM ISTUpdated : Apr 26, 2024, 08:55 PM IST
ದಕ್ಷಿಣ ಕನ್ನಡ 2024 Elections ಸಂಜೆ 5ಗಂಟೆ ವೇಳೆಗೆ ಶೇ.71.83ರಷ್ಟು ಮತದಾನ

ಸಾರಾಂಶ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದೆ. ಸಂಜೆ 5ಗಂಟೆ ವೇಳೆಗೆ ಶೇ.71.83ರಷ್ಟು ಮತದಾನ

ಮಂಗಳೂರು (ಏ26): ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡದಲ್ಲಿ ಬೆಳಗ್ಗಿನಿಂದ ಉತ್ತಮ ಮತದಾನವಾಗಿದೆ. ಸಂಜೆ 5ಗಂಟೆ ವೇಳೆಗೆ ಶೇ.71.83ರಷ್ಟು ಮತದಾನವಾಗಿದೆ.  ಮಧ್ಯಾಹ್ನ 3 ಗಂಟೆಯ ವೇಳೆಗೆ ದಕ್ಷಿಣ ಕನ್ನಡದಲ್ಲಿ ಶೇ. 58.76ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬೆಳಗ್ಗೆ 9 ಗಂಟೆಗೆ ಶೇ. 14.33ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಹೇಳಿತ್ಮತು. ಧಧ್ಯಾಹ್ನ 1 ಗಂಟೆಯ ವೇಳೆ ಶೇ. 48.10ರಷ್ಟು ಮತದಾನವಾಗಿದ್ದು, ಒಟ್ಟಾರೆ, ದಕ್ಷಿಣ ಕನ್ನಡದಲ್ಲಿ ಉತ್ತಮವಾಗಿ ವೋಟಿಂಗ್‌ ಆಗುವ ಮಾಹಿತಿ ಸಿಕ್ಕಿದೆ. 

ದಕ್ಷಿಣ ಕನ್ನಡದಲ್ಲಿ ಈ ಬಾರಿ ಬಿಜೆಪಿ ಹೊಸ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟಗೆ ಟಿಕೆಟ್‌ ನೀಡಿದ್ದರೆ, ಕಾಂಗ್ರೆಸ್‌ನಿಂದ ಪದ್ಮರಾಜ್‌ ಕಣದಲ್ಲಿದ್ದಾರೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 18.18 ಲಕ್ಷ ಮತದಾರರು ಈ ಲೋಕಸಭಾ ಕ್ಷೇತ್ರದಲ್ಲಿದ್ದು, 8.79 ಲಕ್ಷ ಪುರುಷ ಹಾಗೂ 9.30 ಲಕ್ಷ ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ. ಒಟಟು 38,386 ಮಂದಿ ಹೊಸ ಮತದಾರರಿದ್ದಾರೆ. ಬಿಜೆಪಿಗೆ ಈ ಕ್ಷೇತ್ರ ಸಲೀಸಾಗಿದ್ದರೂ ಕಾಂಗ್ರೆಸ್‌ನ ಒಗಟ್ಟು ಹಾಗೂ ವ್ಯವಸ್ಥಿತ ಪ್ರಚಾರದ ಕಾರಣದಿಂದಾಗಿ ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟಿದೆ. 1991ರಿಂದ ತನ್ನ ವಶದಲ್ಲಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಹ್ಯಾಟ್ರಿಕ್‌ ಜಯ ಸಾಧಿಸಿರುವ ಅಭ್ಯರ್ಥಿ ನಳೀನ್‌ ಕುಮಾರ್‌ ಕಟೀಲ್‌ರನ್ನು ಬದಲಿಸಿ ಬ್ರಿಜೇಶ್‌ ಚೌಟಗೆ ಟಿಕೆಟ್‌ ನೀಡಿದೆ. ಇನ್ನೊಂದೆಡೆ ಕಾಂಗ್ರೆಸ್‌ನಿಂದ ದಿಗ್ಗಜ ಜನಾರ್ಧನ ಪೂಜಾರಿ ಶಿಷ್ಯ ಪದ್ಮರಾಜ್‌ ಅವರನ್ನು ಕಣಕ್ಕೆ ಇಳಿಸುವ ಮೂಲಕ ಸೆಡ್ಡು ಹೊಡೆದಿದೆ.

ಕರ್ನಾಟಕ Election 2024 Live: ಬೆಳಗ್ಗೆ 9ರ ಹೊತ್ತಿಗೆ ರಾಜ್ಯಾದ್ಯಂತ ಶೇ.9.21ರಷ್ಟು ಮತದಾನ

ಯುಟಿ ಖಾದರ್‌, ನಳಿನ್‌ ಕುಮಾರ್‌ ಕಟೀಲ್‌ ಮತದಾನ: ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌, ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಬೂತ್ ನಂಬರ್ 103 ರಲ್ಲಿ ಮತದಾನ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೋಳಿಯಾರು ಸರ್ಕಾರಿ ಶಾಲೆಯಲ್ಲಿ ಪತ್ನಿ, ಮಗಳ ಜತೆ ಬಂದು ಸ್ಪೀಕರ್‌ ಮತದಾನ ಮಾಡಿದರು.

LIVE: ಚಾಮರಾಜನಗರ 2024 Elections: ಬೆಳಗ್ಗೆ 9 ಗಂಟೆ ವೇಳೆಗೆ ಶೇ. 7.70ರಷ್ಟು ಮತದಾನ

ಕಟೀಲ್‌ ಕಾಲು ಹಿಡಿದು ಆಶೀರ್ವಾದ ಪಡೆದ ಕಾಂಗ್ರೆಸ್‌ ಅಭ್ಯರ್ಥಿ: ಸಂಸದ ನಳಿನ್ ಕುಮಾರ್ ಕಟೀಲು ಕಾಲು ಹಿಡಿದು ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆಶೀರ್ವಾದ ಪಡೆದರು. ಈ ವೇಳೆ ಪದ್ಮರಾಜ್‌ರನ್ನು ನಳಿನ್ ಅಭಿನಂದಿಸಿದ್ದಾರೆ. ಮಂಗಳೂರು ಲೇಡಿಹಿಲ್‌ ಅಲೋಶಿಯಸ್ ಶಾಲೆಯಲ್ಲಿ ಮತದಾನಕ್ಕೆ ಆಗಮಿಸಿದ್ದರು. ಈ ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಹಾಗೂ ಸಂಸದ ನಳಿನ್ ಮುಖಾಮುಖಿಯಾಗಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ