
ಚಾಮರಾಜನಗರ (ಆ.24): ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರ ಇಲ್ಲ. ವೈಟ್ನರ್ ಬಳಸಿ ತಿದ್ದಿದ ಆರೋಪ ನಿರಾಧಾರ. ಸುಖಾಸುಮ್ಮನೆ ಇದನ್ನು ರಾಜಕೀಯಕರಣಗೊಳಿಸಿದ್ದಾರೆ ಎಂದು ಸಚಿವ ಹೆಚ್ಸಿ ಮಹದೇವಪ್ಪ ಹೇಳಿದರು.
ಇಂದು ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆ ಕಡೆ ಗಮನ ಹರಿಸದೆ ವೃತ ಕಾಲಹರಣ ಮಾಡುತ್ತಿದ್ದಾರೆ. ಮುಡಾ ವಿಚಾರದಲ್ಲಿ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಆಗಿದೆ. ನ್ಯಾಯಾಲಯದ ಮುಂದೆ ಪ್ರಕರಣ ಇದೆ. ಇದರಲ್ಲಿ ಸಿಎಂ ಅವರ ಯಾವ ಪಾತ್ರವೂ ಇಲ್ಲ, ಹಣಕಾಸು ವ್ಯವಹಾರವೂ ಇಲ್ಲ. ವಿರೋದಿಗಳು ಅಂತೆ ಕಂತೆಗಳ ಸೃಷ್ಟಿಮಾಡಿದ್ದಾರೆ ಆ ಮೂಲಕ ಪ್ರಮಾಣಿಕ ಬದ್ಧತೆ, ಹಿಂದೂಳಿದ ವರ್ಗನ ನಾಯಕನ ವ್ಯಕ್ತಿತ್ವ, ಗೌರವಕ್ಕೆ ಧಕ್ಕೆ ತರುವ ಯತ್ನ ಕೋಮುವಾದಿಗಳು ನಡೆಸಿದ್ದಾರೆ. ಕೋಮುವಾದಿಗಳ ಉದ್ದೇಶ ಗ್ಯಾರಂಟಿ ಯೋಜನೆಗಳು ಜಾರಿ ಆಗಬಾರದು ಎಂಬುದಾಗಿದೆ. ಜೆಡಿಎಸ್ ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಎಲ್ಲ ಸೇರಿ ರಾಜಕೀಯ ಪಿತೂರಿ ನಡೆಸಿದ್ದಾರೆ ಎಂದು ಕಿಡಿಕಾರಿದರು.
'3,666 ಎಕರೆ ಜಾಗ ಬರೀ ₹20 ಕೋಟಿಗೆ ಜಿಂದಾಲ್ಗೆ ಮಾರಾಟ, 'ಇದೇನು ನಿಮ್ಮಪ್ಪನ ಆಸ್ತಿನಾ?' ಸಿಎಂ ವಿರುದ್ಧ ಬೆಲ್ಲದ್ ಗರಂ
ಸಿಎಂ ರಾಜೀನಾಮೆ ಕೊಡ್ತಾರೆಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಜನರು 136 ಸೀಟು ಕೊಟ್ಟು ಗೆಲ್ಲಿಸಿರೋದು ವಿಜಯೇಂದ್ರ ರಾಜೀನಾಮೆ ಕೇಳಿದ್ರೆ ಕೊಡೋದಕ್ಕಾ? ಇವರೆಲ್ಲ ಏನೇನು ಮಾಡಿದ್ದಾರೆ ಗೊತ್ತಾ? ವಿಜಯೇಂದ್ರ ಯಡಿಯೂರಪ್ಪ, ಅಶೋಕ್, ಹೆಚ್ಡಿಕೆ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಇವರ ಮೇಲೆ ಸಾಕಷ್ಟು ಕೇಸ್ಗಳೆಲ್ಲ ಪ್ರಾಸಿಕ್ಯೂಷನ್ನಲ್ಲಿ ಬಿದ್ದಿವೆ. ಮೊದಲು ಅವರದೇ ಶುದ್ಧಿ ನೋಡಿಕೊಳ್ಳಲಿ. ಶಾಸಕರು ಮಂತ್ರಿಗಳು ಹೈಕಮಾಂಡ್ ಸಿಎಂ ಸಿದ್ದರಾಮಯ್ಯರ ಪರ ಇದ್ದಾರೆ. ಸಿಎಂ ತಪ್ಪೇ ಮಾಡಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.