ವರಿಷ್ಠರ ನೇರ ಸಂಪರ್ಕಕ್ಕೆ ಜಾರಕಿಹೊಳಿ ಕಸರತ್ತು!

Published : Feb 13, 2020, 11:48 AM ISTUpdated : Feb 13, 2020, 11:50 AM IST
ವರಿಷ್ಠರ ನೇರ ಸಂಪರ್ಕಕ್ಕೆ ಜಾರಕಿಹೊಳಿ ಕಸರತ್ತು!

ಸಾರಾಂಶ

ವರಿಷ್ಠರ ನೇರ ಸಂಪರ್ಕಕ್ಕೆ ಜಾರಕಿಹೊಳಿ ಕಸರತ್ತು| ಕೃತಜ್ಞತೆ ಹೇಳುವ ನೆಪದಲ್ಲಿ ದಿಲ್ಲಿ ಪ್ರವಾಸ| ಯೋಗೇಶ್ವರ್‌ ಜೊತೆ ಮುಖಂಡರ ಭೇಟಿ

 ಬೆಂಗಳೂರು[ಫೆ.13]: ಕಳೆದ ವಾರವಷ್ಟೇ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಮೇಶ್‌ ಜಾರಕಿಹೊಳಿ ಅವರು ಪಕ್ಷದ ವರಿಷ್ಠರೊಂದಿಗೆ ನೇರ ಸಂಪರ್ಕ ಸಾಧಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಮಾಣ ವಚನ ಸ್ವೀಕಾರಕ್ಕೆ ನನಗೆ ಮನಸ್ಸಿರಲಿಲ್ಲ: ರಮೇಶ್‌ ಜಾರಕಿಹೊಳಿ

ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಜಾರಕಿಹೊಳಿ ಅವರು ತಮ್ಮನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ಕೃತಜ್ಞತೆ ತಿಳಿಸುವ ನೆಪದಲ್ಲಿ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಸೇರಿದಂತೆ ಹಲವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಭವಿಷ್ಯದಲ್ಲಿ ಸಂದರ್ಭ ಬಂದರೆ ವರಿಷ್ಠರ ಕೃಪೆ ಬೇಕಾಗುತ್ತದೆ. ಕೇವಲ ರಾಜ್ಯ ನಾಯಕರನ್ನು ನೆಚ್ಚಿಕೊಂಡರೆ ಕಷ್ಟವಾಗಬಹುದು ಎಂಬ ದೂರದೃಷ್ಟಿಯಿಂದ ತಾವೇ ನೇರವಾಗಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುವ ನಿರ್ಧಾರಕ್ಕೆ ಜಾರಕಿಹೊಳಿ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಖಾತೆ ಅಂತಿಮ, ಯಾರ ಬಳಿ ಇದ್ದಿದ್ದು ಯಾರಿಗೆ, ಲಾಭ ನಷ್ಟದ ಲೆಕ್ಕಾಚಾರ!

ಸಂಪುಟ ವಿಸ್ತರಣೆ ವೇಳೆ ಅನ್ಯ ಪಕ್ಷಗಳಿಂದ ಬಿಜೆಪಿಗೆ ಬಂದ ಹತ್ತು ಮಂದಿ ನೂತನ ಸಚಿವರಾದರೂ ಈ ಪೈಕಿ ಜಾರಕಿಹೊಳಿ ಅವರೊಬ್ಬರು ಮಾತ್ರ ವರಿಷ್ಠರ ಭೇಟಿ ಮಾಡಲು ಮುಂದಾಗಿರುವುದು ವಿಶೇಷ. ಜಾರಕಿಹೊಳಿ ಅವರಿಗೆ ಪಕ್ಷದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಅವರು ಸಾಥ್‌ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ