
ಶಿವಮೊಗ್ಗ (ಆ.18): ಸಿಎಂ ಸಿದ್ದರಾಮಯ್ಯನವರು ಯಾವ ತಪ್ಪು ಮಾಡಿಲ್ಲ. ಯಾಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಸ್ಎಸ್ ಮಲ್ಲಿಕಾರ್ಜುನ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಬಿಆರ್ಪಿಯಲ್ಲಿರುವ ಭದ್ರಾ ಜಲಾಶಯಕ್ಕೆ ತೆರಳಿ ಪತ್ನಿ ಸಂಸದೆ ಸಂಸದ ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದರ ಹಿಂದೆ ವಿರೋಧ ಪಕ್ಷದವರ ಷಡ್ಯಂತ್ರವಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರ ಆಶೀರ್ವಾದ ಸಿಕ್ಕಿ ಸಿಎಂ ಆಗಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ರಾಜ್ಯಪಾಲರು ಹಾಗೂ ವಿರೋಧ ಪಕ್ಷದವರು ಮಾಡಿರುವ ಷಡ್ಯಂತ್ರ ಎಂದು ಆರೋಪಿಸಿದರು.
ಈ ಬಾರಿ ಎರಡು ಬೆಳೆಗೆ ನೀರು:
ಮಧ್ಯ ಕರ್ನಾಟಕದ ಜೀವನದಿ ಭದ್ರಾ ಜಲಾಶಯ ಈ ಬಾರಿ ಭರ್ತಿಯಾಗಿದೆ. ಕಳೆದ ಬಾರಿ ಭರ್ತಿಯಾಗದೆ ಒಂದು ಬೆಳೆಗೆ ಮಾತ್ರ ನೀರಾವರಿ ಸೌಲಭ್ಯ ಕಲ್ಪಿಸಲಾಗಿತ್ತು. ಈ ಬಾರಿ ಭರ್ತಿಯಾದ ಹಿನ್ನೆಲೆ ಎರಡು ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ರೈತರು ಒಳ್ಳೆಯ ಬೆಳೆ ಬೆಳೆಯಲಿ, ಬೆಳೆದ ಬೆಳೆಗೆ ಒಳ್ಳೆಯ ಬೆಲೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದೇ ವೇಳೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಭದ್ರ ಜಲಾಶಯ ಭರ್ತಿಯಾಗಿದ್ದು, ಬಾಗಿನ ಅರ್ಪಣೆ ಮಾಡಿದ್ದೇವೆ. ಇದೇ ರೀತಿ ಭದ್ರಾ ಜಲಾಶಯ ತುಂಬಿರಲಿ. ರೈತರಿಗೆ ಮಳೆ ಬೆಳೆ ಚೆನ್ನಾಗಿ ಬರಲಿ, ರೈತರು ಸುಖವಾಗಿರಲಿ ಎಂದು ಹಾರೈಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.