
ಚಾಮರಾಜನಗರ(ಏ. 02) ಒಳ್ಳೆಯದನ್ನು ಜನರಿಗೆ ಹೇಳಬೇಕು, ಕೆಟ್ಟದನ್ನು ನಮ್ಮ ವೇದಿಕೆಯಲ್ಲಿ ಚರ್ಚಿಸಬೇಕು ಎಂಬುದು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಈಶ್ವರಪ್ಪ ಬರೆದ ಪತ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸರ್ಕಾರದ ವಿಚಾರದ ಬಗ್ಗೆ ಪತ್ರ ಬರೆಯುವ ಅವಶ್ಯಕತೆ ಇರಲಿಲ್ಲ. ಪತ್ರ ಬಹಿರಂಗ ಆಗುವ ಅವಶ್ಯಕತೆ ಇರಲಿಲ್ಲ. ಒಳ್ಳೆಯದನ್ನು ನಾವು ಹೊರಗಡೆ ಹೇಳಬೇಕು. ಕೆಟ್ಟದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡ ಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.
'ನೀವು ಸಿಎಂ ಆಗಿರಿ ಉಳಿದ ಎಲ್ಲ ಖಾತೆಯ ಜವಾಬ್ದಾರಿ ವಿಜಯೇಂದ್ರಗೆ ಕೊಡಿ'
ಬೆಂಗಳೂರಿನ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನಗಳವರೆಗೆ ಮಾತ್ರ ಶಾಲೆ ಇರಲ್ಲ, ಈ ಸಂಬಂಧ ಸಿಎಂ ಜೊತೆ ಮಾತುಕತೆ ಮಾಡಲಾಗಿದೆ.
10ನೇ ತರಗತಿ ಶಾಲೆಗೆ ಹಾಜರಾತಿ ಕಡ್ಡಾಯ ಅಲ್ಲ, ಪೋಷಕರ ಅನುಮತಿ ಪಡೆದು, ಒಪ್ಪಿಗೆ ಪತ್ರವನ್ನ ವಿದ್ಯಾರ್ಥಿಗಳು ತರಬೇಕು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡಿದೆ. ಹೊಸ ಮಾರ್ಗಸೂಚಿ ಹೊರಡಿಸಲಾಗಿದ್ದು ಜಿಮ್ ಮತ್ತು ಈಜುಕೋಳಕ್ಕೆ ನಿರ್ಬಂಧ ಹೇರಲಾಗಿದೆ. ಸಿನಿಮಾ ಮಂದಿರದಲ್ಲಿ ಸೀಟು ಭರ್ತಿ ಸಂಖ್ಯೆ ಅರ್ಧಕ್ಕೆ ಇಳಿಸಲಾಗಿದ್ದು ಸಾರ್ವಜನಿಕ ಸಾರಿಗೆ ಮತ್ತು ಧಾರ್ಮಿಕ ಸಭೆ ಸಮಾರಂಭಗಳ ಮೇಲೆಯೂ ಕ್ರಮ ತೆಗೆದುಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.