ದೆಹಲಿ ಹೈಕಮಾಂಡ್‌ನಿಂದ ನಮ್ಮ ತಂದೆಗೆ ಕ್ಲೀನ್‌ಚಿಟ್ ಸಿಕ್ಕಿದೆ: ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

Published : Aug 08, 2024, 01:00 PM IST
ದೆಹಲಿ ಹೈಕಮಾಂಡ್‌ನಿಂದ ನಮ್ಮ ತಂದೆಗೆ ಕ್ಲೀನ್‌ಚಿಟ್ ಸಿಕ್ಕಿದೆ: ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಸಾರಾಂಶ

ಮುಡಾದಲ್ಲಿ ಹಗರಣ ನಡೆದಿಲ್ಲ. ನಮ್ಮ ತಂದೆಗೆ(ಸಿಎಂ ಸಿದ್ದರಾಮಯ್ಯ) ದೆಹಲಿ ಹೈಕಮಾಂಡ್‌ನಿಂದಲೇ ಕ್ಲೀನ್‌ಚಿಟ್ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದರು.

ಮೈಸೂರು (ಆ.8): ಮುಡಾದಲ್ಲಿ ಹಗರಣ ನಡೆದಿಲ್ಲ. ನಮ್ಮ ತಂದೆಗೆ(ಸಿಎಂ ಸಿದ್ದರಾಮಯ್ಯ) ದೆಹಲಿ ಹೈಕಮಾಂಡ್‌ನಿಂದಲೇ ಕ್ಲೀನ್‌ಚಿಟ್ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದರು.

ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪರ ನಡೆಸಿದ ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ಡಾ ಯತೀಂದ್ರ ಅವರು, ಜನರಿಂದ ಆಯ್ಕೆಯಾದ ಸರ್ಕಾರವನ್ನು ಸುಳ್ಳು ಆರೋಪ ಮಾಡಿ ಬಿಳಿಸುವ ಕುತಂತ್ರಕ್ಕೆ ನಾವು ಬಿಡೊಲ್ಲ. ಅದರ ವಿರುದ್ಧ ಏನು  ಮಾಡಬೇಕೋ ಆ ಹೋರಾಟವನ್ನು ನಮ್ಮ ಪಕ್ಷದವರು ಮಾಡುತ್ತಾರೆ. ದೆಹಲಿ ಹೈಕಮಾಂಡ್ ಕೂಡ ನಮ್ಮ ತಂದೆಯವರದು ಏನೂ ತಪ್ಪಿಲ್ಲ, ಮುಖ್ಯಮಂತ್ರಿಗಳಿಗೆ ಬೆಂಬಲ ಕೊಡ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ನಮಗೆ ಪಕ್ಷದ ಬೆಂಬಲ, ನಾಯಕರ ಬೆಂಬಲ ಹಾಗೂ ಕಾರ್ಯಕರ್ತರ ಬೆಂಬಲವಿದೆ. ನಾವೂ ಕೂಡ ಜನರ ಮುಂದೆ ಹೋಗಿ ಹೋರಾಟ ಮಾಡುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸೋದು ಕನಸಿನ ಮಾತು: ವಿಜಯೇಂದ್ರಗೆ ಡಾ ಯತೀಂದ್ರ ತಿರುಗೇಟು

ಏನೂ ತಪ್ಪು ಮಾಡದಿದ್ರೂ ಸಿಎಂ ಸಿದ್ದರಾಮಯ್ಯ ಅವರು ಇವತ್ತು ಆರೋಪ ಎದುರಿಸಬೇಕಾಗಿ ಬಂದಿದೆ. ಈಗ ತಂದೆಯವರ ಪ್ರಾಮಾಣಿಕ ರಾಜಕೀಯ ಜೀವನ ಜನರು, ಬೆಂಬಲಿಗರು ಅರ್ಥಮಾಡಿಕೊಳ್ಳುವಂತಾಗುತ್ತೆ. ಹೀಗಾಗಿ ವಿಚಾರ ಸಂಕೀರ್ಣ ಮೂಲಕ ಬಿಜೆಪಿಯವರ ಕುತಂತ್ರ ತಿಳಿಸುವ ಕೆಲಸ ಮಾಡಿದ್ದಕ್ಕೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್