ವಿಧಾನ ಪರಿಷತ್‌ ಚುನಾವಣೇಲೂ ಕೋಟಿ ಕುಳಗಳು..!

Published : May 18, 2024, 09:17 AM ISTUpdated : May 21, 2024, 02:10 PM IST
ವಿಧಾನ ಪರಿಷತ್‌ ಚುನಾವಣೇಲೂ ಕೋಟಿ ಕುಳಗಳು..!

ಸಾರಾಂಶ

ರಾಜ್ಯದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇವರಲ್ಲೂ ಕೋಟ್ಯಧಿಪತಿಗಳೇ ಹೆಚ್ಚಿದ್ದಾರೆ.

ಬೆಂಗಳೂರು(ಮೇ.18):  ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರು ಒಟ್ಟು 18 ಕೋಟಿ ರು. ಒಡೆಯರಾಗಿದ್ದಾರೆ.

ಬಿಜೆಪಿ ಟಿಕೆಟ್ ದೊರೆಯದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿರುವ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ 6.68 ಲಕ್ಷ ನಗದು ಹೊಂದಿದ್ದಾರೆ. ಗೃಹ ನಿರ್ಮಾಣ ಸಂಸ್ಥೆಗಳು, ವಿವಿಧ ಕಂಪನಿಗಳ ಷೇರು, ಚಿನ್ನಾಭರಣ ಮೇಲೆ ಹೆಚ್ಚು ಹೂಡಿಕೆ ಮಾಡಿರುವ ಇವರು 8.19 ಕೋಟಿ ರು. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಶಿಲ್ಪಾ ಬಳಿ 1.11 ಕೋಟಿ ರು. ಮೌಲ್ಯದ ಚರಾಸ್ತಿಯಿದೆ. ಶಿಲ್ಪಾ ಅವರು ಪತಿಗೆ 65.38 ಲಕ್ಷ ರು. ಸಾಲ ನೀಡಿದ್ದಾರೆ. ರಘುಪತಿ ಭಟ್ ಕೃಷಿ ಹಾಗೂ ಕೃಷಿಯೇತರ ಜಮೀನು ಸೇರಿ ಒಟ್ಟು 9.76 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದು, ಇವರಿಗೆ 4.10 ಕೋಟಿ ರು. ಸಾಲವಿದೆ, ಪತ್ನಿ ಶಿಲ್ಪಾ 42 ಲಕ್ಷ ರು. ಸಾಲಕ್ಕೆ ಹೊಣೆಗಾರರಾಗಿದ್ದಾರೆ.

ವಿಧಾನಪರಿಷತ್‌ 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ರಾಜ್ಯದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇವರಲ್ಲೂ ಕೋಟ್ಯಧಿಪತಿಗಳೇ ಹೆಚ್ಚಿದ್ದಾರೆ. ನಾಮಪತ್ರದ ಜೊತೆಗೆ ಅವರು ಸಲ್ಲಿಸಿರುವ ಆಸ್ತಿ ವಿವರದಲ್ಲಿ ಈ ಮಾಹಿತಿಯಿದೆ.

ಡಿ.ಟಿ.ಶ್ರೀನಿವಾಸ್‌
140 ಕೋಟಿ ರು.
ಆಗ್ನೇಯ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್‌
ಕೆ.ವಿವೇಕಾನಂದ
124 ಕೋಟಿ ರು.
ದಕ್ಷಿಣ ಶಿಕ್ಷಕರ ಕ್ಷೇತ್ರ
ಜೆಡಿಎಸ್‌
ಎನ್‌.ಪ್ರತಾಪರೆಡ್ಡಿ
115 ಕೋಟಿ ರು.
ಈಶಾನ್ಯ ಪದವೀಧರ ಕ್ಷೇತ್ರ
ಸ್ವತಂತ್ರ ಅಭ್ಯರ್ಥಿ
ವೈ.ಎ.ನಾರಾಯಣಸ್ವಾಮಿ
34 ಕೋಟಿ ರು.
ಆಗ್ನೇಯ ಶಿಕ್ಷಕರ ಕ್ಷೇತ್ರ
ಬಿಜೆಪಿ
ಆಯನೂರು ಮಂಜುನಾಥ್
19 ಕೋಟಿ ರು.
ನೈಋತ್ಯ ಪದವೀಧರ ಕ್ಷೇತ್ರ
ಕಾಂಗ್ರೆಸ್
ರಘುಪತಿ ಭಟ್
18 ಕೋಟಿ ರು.
ನೈಋತ್ಯ ಪದವೀಧರ ಕ್ಷೇತ್ರ
ಬಿಜೆಪಿ ಬಂಡಾಯ
ಡಾ.ಚಂದ್ರಶೇಖರ ಪಾಟೀಲ್‌
11 ಕೋಟಿ ರು.
ಈಶಾನ್ಯ ಪದವೀಧರ ಕ್ಷೇತ್ರ
ಕಾಂಗ್ರೆಸ್‌
ಎ.ದೇವೇಗೌಡ
7.37 ಕೋಟಿ ರು.
ಬೆಂಗಳೂರು ಪದವೀಧರರ ಕ್ಷೇತ್ರ
ಬಿಜೆಪಿ
ಮರಿತಿಬ್ಬೇಗೌಡ
5 ಕೋಟಿ ರು.
ದಕ್ಷಿಣ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್