ಜೆಡಿಎಸ್: ಒಂದು ಸ್ಥಾನಕ್ಕೆ ಐದು ಹೆಸರು ಪ್ರಸ್ತಾಪ

Published : May 25, 2024, 06:44 AM IST
ಜೆಡಿಎಸ್: ಒಂದು ಸ್ಥಾನಕ್ಕೆ ಐದು ಹೆಸರು ಪ್ರಸ್ತಾಪ

ಸಾರಾಂಶ

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಲಭ್ಯವಾಗುವ ಒಂದು ಸ್ಥಾನಕ್ಕೆ ಐದು ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.

ಬೆಂಗಳೂರು (ಮೇ.25): ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಲಭ್ಯವಾಗುವ ಒಂದು ಸ್ಥಾನಕ್ಕೆ ಐದು ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.

ಸದ್ಯ ಪರಿಷತ್ತಿನಿಂದ ನಿವೃತ್ತಿ ಹೊಂದುತ್ತಿರುವ ಬಿ.ಎಂ.ಫಾರೂಕ್, ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ಪರಿಷತ್ತಿನ ಮಾಜಿ ಸದಸ್ಯ ರಮೇಶ್‌ಗೌಡ, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್‌ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಜವರಾಯಿಗೌಡ ಅವರ ಹೆಸರುಗಳು ಪ್ರಸ್ತಾಪವಾಗಿವೆ. ಈ ಹೆಸರುಗಳನ್ನು ಬಿಟ್ಟು ಅಂತಿಮ ಹಂತದಲ್ಲಿ ಹೊಸ ಹೆಸರೂ ಸೇರ್ಪಡೆಯಾಗಬಹುದು ಎನ್ನಲಾಗಿದೆ.

ಈ ಪೈಕಿ ಫಾರೂಕ್ ಅವರಿಗೆ ಮತ್ತೊಂದು ಬಾರಿ ಅವಕಾಶ ಕಲ್ಪಿಸುವ ಸಾಧ್ಯತೆ ಕಡಮೆ ಎನ್ನಲಾಗುತ್ತಿದೆ. ಬಿಜೆಪಿ ಜತೆ ಸ್ನೇಹ ಬೆಳೆಸಿರುವ ಜೆಡಿಎಸ್‌ ನಾಯಕರಲ್ಲಿ ಈಗ ಮುಸ್ಲಿಂ ಸಮುದಾಯದ ಬಗ್ಗೆ ಅಷ್ಟಾಗಿ ಪ್ರೀತಿ ಉಳಿದಂತೆ ಕಾಣುತ್ತಿಲ್ಲ.

ಗಾಂಧಿ ಕುಟುಂಬದ ಮೇಲೆ ಆರೋಪ ಮಾಡೋದನ್ನ ಮೋದಿ ಮೊದಲು ನಿಲ್ಲಿಸಬೇಕು: ಮಲ್ಲಿಕಾರ್ಜುನ ಖರ್ಗೆ ಗರಂ

ಜವರಾಯಿಗೌಡ ಅವರು ಸತತ ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವುದರಿಂದ ಪಕ್ಷದ ನಾಯಕರಿಗೆ ಅನುಕಂಪವಿದೆ. ಆದರೆ, ಹಾಲಿ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್ ಅವರು ಕಾಂಗ್ರೆಸ್‌ಗೆ ವಲಸೆ ಹೋಗುವ ಸಾಧ್ಯತೆ ಇರುವುದರಿಂದ ಉಪಚುನಾವಣೆ ಎದುರಾದರೆ ಜವರಾಯಿಗೌಡ ಅವರನ್ನು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಿಂದ ಮತ್ತೊಮ್ಮೆ ಕಣಕ್ಕಿಳಿಸುವ ಸಂಭವವಿದೆ. ಹೀಗಾಗಿ, ಪರಿಷತ್ತಿಗೆ ಪರಿಗಣಿಸುವ ಬಗ್ಗೆ ಸ್ಪಷ್ಟತೆ ಇಲ್ಲ.

ಹೀಗಾಗಿ, ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬದೊಂದಿಗೆ ನಿಕಟ ಸಂಬಂಧ ಹೊಂದಿರುವ ಕುಪೇಂದ್ರ ರೆಡ್ಡಿ, ಎ.ಪಿ.ರಂಗನಾಥ್‌ ಹಾಗೂ ರಮೇಶ್‌ಗೌಡ ಅವರ ಪೈಕಿ ಒಬ್ಬರಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ.

ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

ಪ್ರಸ್ತಾಪಿತ ಹೆಸರುಗಳು

  • ಕುಪೇಂದ್ರ ರೆಡ್ಡಿ
  • ರಮೇಶ್‌ಗೌಡ
  • ಎ.ಪಿ.ರಂಗನಾಥ್‌
  • ಬಿ.ಎಂ.ಫಾರೂಕ್
  • ಜವರಾಯಿಗೌಡ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!