MLC Elections Result: ರಾಜಕೀಯ ಇತಿಹಾಸದಲ್ಲೇ ದಾಖಲೆ ಬರೆದ ಹೊರಟ್ಟಿ

Published : Jun 15, 2022, 02:29 PM ISTUpdated : Jun 15, 2022, 02:42 PM IST
MLC Elections Result: ರಾಜಕೀಯ ಇತಿಹಾಸದಲ್ಲೇ ದಾಖಲೆ ಬರೆದ ಹೊರಟ್ಟಿ

ಸಾರಾಂಶ

* ಕರ್ನಾಟಕ ವಿಧಾನಪರಿಷತ್ ಚುನಾವಣೆ ಫಲಿತಾಂಶ * ಹೊಸ ದಾಖಲೆ ಬರೆದ ಬಸವರಾಜ ಹೊರಟ್ಟಿ * ಹೊರಟ್ಟಿ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ

ಬೆಳಗಾವಿ, (ಜೂನ್15): ಈ ಬಾರಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. 

ಈ ಬಾರಿ ಬಸವರಾಜ  ಹೊರಟ್ಟಿ ಅವರು ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದರು. ಇದೀಗ ಮತ್ತೊಮ್ಮೆ ಪರಿಷತ್‌ಗೆ ಪ್ರವೇಶ ಮಾಡಿದ ಹೊಸ ದಾಖಲೆ ಬರೆದಿದ್ದಾರೆ.

Karnataka MLC Election Results LIVE: ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಮತಪೆಟ್ಟಿಗೆಯಲ್ಲಿ ಹೆಚ್ಚುವರಿ 6 ಮತಗಳು!

ಮಾಹಿತಿ ಪ್ರಕಾರ 7501 ಮತಗಳನ್ನು ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲೇ  ಬಸವರಾಜ ಹೊರಟ್ಟಿ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ  ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 8ನೇ ಬಾರಿಗೆ ಗೆಲುವು ಸಾಧಿಸಿಸುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿಯೇ ದಾಖಲೆ‌ ನಿರ್ಮಿಸಿದ್ದೇನೆ.

ಇನ್ನು ಈ ಬಗ್ಗೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಪ್ರತಿಕ್ರಿಯಿಸಿರುವ ಹೊರಟ್ಟಿ, 1890ರಿಂದ 2022 ರವರೆಗೆ ನಿರಂತರವಾಗಿ ಗೆಲುವು ಸಾಧಿಸಿದ್ದೇನೆ. ರಾಜಕೀಯದಲ್ಲಿ ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದು ಸಂತಸ ವ್ಯಕ್ತಪಡಿಸಿದರು,

ಚುನಾವಣೆಯಲ್ಲಿ ಚಲಾಯಿಸಿದ ಮತಗಳಲ್ಲಿ ಶೇ.50 ಮತ ಪಡೆದುಕೊಂಡವರು ಗೆಲುವು ಸಾಧಿಸಲಿದ್ದಾರೆ. ಈಗಾಗಲೇ ನಾನು 15 ಸಾವಿರ ಮತಗಳ ಪೈಕಿ 7500 ಮತಗಳನ್ನು ಪಡೆದು ಗೆದ್ದಿದ್ದೇನೆ ಎಂದು ಹೇಳಿದರು.

ಈ ಬಾರಿ ಚುನಾವಣೆಯಲ್ಲಿ 8 ರಿಂದ 10 ಸಾವಿರ‌ ಮತಗಳ ಬರುವ ನಿರೀಕ್ಷೆಯಿಟ್ಟುಕೊಳ್ಳಲಾಗಿತ್ತು. ಇದೀಗ 7 ಸಾವಿರ ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದೇನೆ. ಇನ್ನೂ 2 ಸಾವಿರ‌ ಮತಗಳು ಬರುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು(ಬುಧವಾರ) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಸಂಜೆ ಹೊತ್ತಿಗೆ ಅಧಿಕೃತ ಫಲಿತಾಂಶ ಹೊರಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌