'ಖರ್ಗೆ ಹಾಲು ಕುಡಿದಷ್ಟು, ನಾನು ನೀರು ಕುಡಿದಿಲ್ಲ' ಟಿಎ ಶರವಣ ಮಾತಿಗೆ ಪರಿಷತ್‌ನಲ್ಲಿ ಪ್ರಿಯಾಂಕ್ ಕೆಂಡಾಮಂಡಲ!

Published : Mar 14, 2025, 05:12 PM ISTUpdated : Mar 14, 2025, 05:19 PM IST
'ಖರ್ಗೆ ಹಾಲು ಕುಡಿದಷ್ಟು, ನಾನು ನೀರು ಕುಡಿದಿಲ್ಲ' ಟಿಎ ಶರವಣ ಮಾತಿಗೆ ಪರಿಷತ್‌ನಲ್ಲಿ ಪ್ರಿಯಾಂಕ್ ಕೆಂಡಾಮಂಡಲ!

ಸಾರಾಂಶ

ಹಾಲಾದರೂ ಕುಡಿತಿವಿ, ನೀರಾದರೂ ಕುಡಿತಿವಿ ಇವರಿಗೆ ಯಾಕೆ ಅದೆಲ್ಲ, ಇವರಿಗೆ ಏನು ಬೇಕು?' ಎಂದು ಟಿಎ ಸರವಣ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗರಂ ಆದ ಘಟನೆ ನಡೆಯಿತು.

ಪರಿಷತ್: 'ಹಾಲಾದರೂ ಕುಡಿತಿವಿ, ನೀರಾದರೂ ಕುಡಿತಿವಿ ಇವರಿಗೆ ಯಾಕೆ ಅದೆಲ್ಲ, ಇವರಿಗೆ ಏನು ಬೇಕು?' ಎಂದು ಟಿಎ ಸರವಣ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗರಂ ಆದ ಘಟನೆ ನಡೆಯಿತು.

ಇಂದು ಪರಿಷತ್ ಕಲಾಪ ವೇಳೆ,'ಪ್ರಿಯಾಂಕ್ ಖರ್ಗೆ ಹಾಲು ಕುಡಿದಷ್ಟು ನಾನು ನೀರು ಕುಡಿದಿಲ್ಲ' ಎಂಬ ಶರವಣ ಮಾತಿಗೆ ಕೆಂಡಾಮಂಡಲರಾದ ಪ್ರಿಯಾಂಕ್ ಖರ್ಗೆ ಅವರು, ಇವರಿಗೆಲ್ಲ ಯಾಕೆ ನನ್ನ ಬಗ್ಗೆ ಅಸಹನೆ, ಈ ಅಸಹನೆ ಬಡ ಕುಟುಂಬದ, ಸಮುದಾಯದ ಬಗ್ಗೆ ಅಸಹನೆಯಿದೆ. ಮಾಧ್ಯಮದಲ್ಲೂ ಅದೇ, ಮೇಲ್ಮನೆ, ಕೆಳಮನೆಯಲ್ಲೂ ಅದೇ ಮಾತು ಕೇಳಿಬರ್ತಿದೆ. ಕೆಳವರ್ಗದ ಮೇಲೆ ಯಾಕಿಷ್ಟು ಅಸಹನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಇಲ್ಲಿ ಅರ್ಹತೆ ಮೇಲೆ ಬಂದಿದ್ದೇನೆ:

ಪ್ರಿಯಾಂಕ್ ಖರ್ಗೆ ಕಂಡ್ರೆ ನಿಮಗೆ ಯಾಕೆ ಅಸಹನೆ? ನಾನು ಇಲ್ಲಿ ಯಾರ ಮರ್ಜಿ, ಮುಲಾಜಿನಲ್ಲಿ ಬಂದಿಲ್ಲ ಅರ್ಹತೆ ಮೇಲೆ ಬಂದಿದ್ದೇನೆ. ನಿಮ್ಮ ಭಿಕ್ಷೆಯಿಂದ ಅಥವಾ ಯಾರದ್ದೋ ಭಿಕ್ಷೆಯಿಂದ ನಾನಿಲ್ಲಿಗೆ ಬಂದಿಲ್ಲ. ಯಾವಾಗಲೂ ನಾನು ಎದ್ದು ನಿಂತು ಮಾತಾಡಿದಾಗ ಅಸಹನೆ ತೋರಿಸುತ್ತಾರೆ. ಜನರ ಕೃಪೆಯಿಂದ ನಾನು, ಮಲ್ಲಿಕಾರ್ಜುನ ಖರ್ಗೆಯವರು ಇಷ್ಟರ ಮಟ್ಟಕ್ಕೆ ಬಂದಿದ್ದೇವೆ ಸಮುದಾಯದವರು ಹಾಲು ಕುಡಿಬಾರ್ದಾ? ಎಂದು ಪ್ರಶ್ನಿಸಿದರು. ಈ ವೇಳೆ 'ನಾನು ಏನು ತಪ್ಪು ಮಾತನಾಡಿದೆ ಹೇಳಿ ಎಂದು ಶರವಣ ಮರುಪ್ರಶ್ನಿಸಿದರು.

ಇದನ್ನೂ ಓದಿ: ಕರ್ನಾಟಕ ಮುಂಚೂಣಿ ರಾಜ್ಯವೆಂಬುದನ್ನು ಬಜೆಟ್‌ ನಿರೂಪಿಸಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ಬಂದ  ಡಿಕೆಶಿ:

ಈ ವೇಳೆ ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು, ಪ್ರಿಯಾಂಕ್ ಖರ್ಗೆ ಅರ್ಹತೆಯಿಂದ ಬಂದವರು. ಅವರು ನಮ್ಮ ಪಾರ್ಟಿಯ ಧ್ವನಿ. ಯಾರು ಏನು ಕುಡಿತಾರೆ ಅಂತಾ ನಾವು ಕೇಳೋಕಾಗುತ್ತಾ? ನಾನು ಬೆಳಗ್ಗೆ ಎದ್ರೆ ವಿಸ್ಕಿ ಕುಡಿತಿನಿ ಅದನ್ನು ಯಾಕೆ ಅಂತ ಕೇಳೋಕಾಗತ್ತಾ ಎಂದ ಡಿಕೆ ಶಿವಕುಮಾರ.

ನನ್ನ ವೃತ್ತಿ ಬಗ್ಗೆಯೂ ಮಾತಾಡ್ತಾರಲ್ಲ?

ಈ ವೇಳೆ ಪುನಃ ತನ್ನ ಮಾತು ಸಮರ್ಥಿಸಿಕೊಂಡ ಸರವಣ, ನಾನು ಪ್ರಿಯಾಂಕ್ ಖರ್ಗೆ ಬಗ್ಗೆ ಒಳ್ಳೆಯ ಮನಸಿನಿಂದ ಹೇಳಿದ್ದೇನೆ ಹೊರತು ಯಾವುದೇ ಉದ್ದೇಶವಿಲ್ಲ. ನನ್ನ ಹೇಳಿಕೀ ಅಪಾರ್ಥ ಮಾಡಿಕೊಂಡಿದ್ದಾರೆ. ಅವರು ಅಪಾರ್ಥ ಮಾಡಿಕೊಂಡಿದ್ದರೆ ನಾನು ಏನು ಮಾಡಲಿಕ್ಕೆ ಆಗುತ್ತೆ? ನನ್ನ ಬಗ್ಗೆ, ನನ್ನ ವೃತ್ತಿ ಬಗ್ಗೆಯೂ ಕೆಲವರು ಪದೇಪದೆ ಮಾತನಾಡುತ್ತಾರೆ. ಹಾಗಾಂತ ಅವರ ಮೇಲೆ ಕೋಪಿಸಿಕೊಳ್ಳಲಿಕ್ಕೆ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!