BSYಗೆ ತಲೆಬಿಸಿ, ತಣ್ಣಗೆ ಕೂತು ಬಿಸಿ ಮುಟ್ಟಿಸಿದ ಮಿತ್ರಮಂಡಳಿ ನಾಯಕ!

Published : Mar 08, 2020, 03:25 PM IST
BSYಗೆ ತಲೆಬಿಸಿ, ತಣ್ಣಗೆ ಕೂತು ಬಿಸಿ ಮುಟ್ಟಿಸಿದ ಮಿತ್ರಮಂಡಳಿ ನಾಯಕ!

ಸಾರಾಂಶ

ಬಿಜೆಪಿ ನಾಯಕರು ನನ್ನ ಜತೆ ಇದ್ದಾರೆ/ ಕೋಲಾರದಲ್ಲಿ ಹೇಳಿಕೆ ನೀಡಿದ ಆರ್. ಶಂಕರ್/ ಜೂನ್ ನಲ್ಲಿ ನನಗೆ ಟಿಕೆಟ್ ಸಿಗಲಿದೆ/ ವಿಶ್ವಾಸ ವ್ಯಕ್ತಪಡಿಸಿದನ ಮಾಜಿ ಸಚಿವ

ಕೋಲಾರ(ಮಾ. 08)  ಬಿಜೆಪಿಯ ನಾಯಕರು ನನ್ನ ಜೊತೆ ಇದ್ದಾರೆ. ಮುಂದಿನ ಭವಿಷ್ಯ ಹೇಳುವ ತ್ರಿಕಾಲ ಜ್ಞಾನಿ ನಾನಲ್ಲ. ಸರ್ಕಾರ ನೂರಕ್ಕೆ ನೂರು ಸುಭದ್ರವಾಗಿರುತ್ತೆ ಎಂದು ಮಾಜಿ ಸಚಿವ ಆರ್ ಶಂಕರ್ ಭವಿಷ್ಯ ನುಡಿದಿದ್ದಾರೆ.

ನಾನು ಮಂತ್ರಿ ಆಗಿದವನು, ನಿಗಮ ಮಂಡಳಿ ಬೇಡಿಕೆ ಇಟ್ಟಿಲ್ಲ. ಲಕ್ಷ್ಮಣ ಸೌದಿ ಜೊತೆ ನಾನು ಎಂಎಲ್ಸಿ ಟಿಕೆಟ್ ಕೇಳಿದ್ದೆ ಆದ್ರೆ ಸಿಗಲಿಲ್ಲ. ಜೂನ್ ತಿಂಗಳಲ್ಲಿ ನಡೆಯುವ ಎಂಎಲ್ಸಿ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗಲಿದೆ . ಎಂಎಲ್ಸಿ ಮಾಡಿ ಮಂತ್ರಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಕಾನೂನು ತೊಡಕಿನಿಂದ ವಿಳಂಬವಾಗಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ದೋಸ್ತಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ರಾಜಕೀಯ ಏರುಪೇರಾಗಿತ್ತು. 17 ಶಾಸಕರು ಏಕಾಏಕಿ ರಾಜೀನಾಮೆ ನೀಡಿದ್ದರು. ಪರಿಣಾಮ ದೋಸ್ತಿ ಸರ್ಕಾರ ಪತನವಾಗಿ  ಬಿಜೆಪಿ ಅಧಿಕಾರ ಹಿಡಿದಿತ್ತು. ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು. ಈ ವೇಳೆ ಹಿಂದಿನ ಅಂದರೆ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಲಕ್ಷ್ಮಣ ಸವದಿ ಅವರನ್ನು ಡಿಸಿಎಂ ಮಾಡಲಾಗಿತ್ತು.

ಇದಾದ ಮೇಲೆ ರಾಜೀನಾಮೆ ನೀಡಿದ್ದ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿತ್ತು. ರಾಣೆಬೆನ್ನೂರು ಕ್ಷೇತ್ರದಿಂದ ಗೆದ್ದಿದ್ದ ಆರ್ ಶಂಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ರಾಜೀನಾಮೆ ಕೊಟ್ಟ ಪಟ್ಟಿಯಲ್ಲಿ ಪಕ್ಷೇತರ ಶಾಸಕರಾಗಿದ್ದ ಆರ್. ಶಂಕರ್ ಇದ್ದರು.

ಇನ್ನೊಂದು ಕಡೆ ಸಿಪಿ ಯೋಗೇಶ್ವರ, ಮುರುಗೇಶ ನಿರಾಣಿ,  ಉಮೇಶ್ ಕತ್ತಿಯಂಥಹ ನಾಯಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಒಟ್ಟಿನಲ್ಲಿ ಜೂನ್ ನಂತರ ಮತ್ತೊಂದು ರಾಜಕಾರಣ ಹೈಡ್ರಾಮಾಕ್ಕೆ ಕರ್ನಾಟಕ ಸಾಕ್ಷಿಯಾದರೆ ಅಚ್ಚರಿ ಇಲ್ಲ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್