ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ನಿಧನಕ್ಕೂ ಮುನ್ನವೇ ಸಂತಾಪ...!

Published : Aug 04, 2020, 02:09 PM ISTUpdated : Aug 04, 2020, 02:27 PM IST
ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ನಿಧನಕ್ಕೂ ಮುನ್ನವೇ ಸಂತಾಪ...!

ಸಾರಾಂಶ

ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಆದ್ರೆ, ಅವರು ನಿಜವಾಗಿಯೂ ಸಾವನ್ನಪ್ಪಿದ್ದಾರಾ? ಅಥವಾ ಇಲ್ವಾ..?

ಬೆಂಗಳೂರು, (ಆ.04): ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ನಿಧನ ಗೊಂದಲಮಯವಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಕೆಲದಿನಗಳಿಂದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಇನ್ನೂ ಹೃದಯ ಬಡಿತವಿದ್ದು, ವೆಂಟಿಲೇಟರ್​ನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಸಾಗರ ಶಾಸಕ ಹರತಾಳು ಹಾಲಪ್ಪನವರಿಗೆ ಕೊರೋನಾ ಸೋಂಕು..!

ಆದ್ರೆ, ಮತ್ತೊಂದೆಡೆ ಇಂದು (ಮಂಗಳವಾರ) ಮಧ್ಯಾಹ್ನ 12.30ರ ಸುಮಾರಿಗೆ ಸತ್ಯನಾರಾಯಣ  ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆಸ್ಪತ್ರೆಗಳು ಮೂಲಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ಹೇಳುತ್ತಿದ್ದರೂ, ಸಚಿವರು ಶಾಸಕರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ

ಸ್ವತಃ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸೇರಿದಂತೆ ಪಕ್ಷದ ನಾಯಕರುಗಳು ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಗೃಹ ಸಚಿವರು, ಡಿಸಿಎಂ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಸಚಿವರುಗಳು ಸಾಮಾಜಿಕ ಜಾಲತಾಗಳಲಲ್ಇ ಸಂತಾಪ ವ್ಯಕ್ತಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!