ಕೃಷ್ಣಾ ಮೇಲ್ದಂಡೆಗೆ ನೀವು ಹಣ ನೀಡಲಿಲ್ಲ, ಈಗ ಕೇಳ್ತಿದ್ದೀರಾ?: ಬಿಎಸ್‌ವೈ ತಿರುಗೇಟು

Published : Mar 10, 2020, 08:35 AM IST
ಕೃಷ್ಣಾ ಮೇಲ್ದಂಡೆಗೆ ನೀವು ಹಣ ನೀಡಲಿಲ್ಲ, ಈಗ ಕೇಳ್ತಿದ್ದೀರಾ?: ಬಿಎಸ್‌ವೈ ತಿರುಗೇಟು

ಸಾರಾಂಶ

ಕೃಷ್ಣಾ ಮೇಲ್ದಂಡೆಗೆ ನೀವು ಹಣ ನೀಡದೆ ಈಗ ಕೇಳ್ತಿದ್ದೀರಾ: ಸಿಎಂ| ಕಾಂಗ್ರೆಸ್‌, ಜೆಡಿಎಸ್‌ಗೆ ತಿರುಗೇಟು ನೀಡಿದ ಯಡಿಯೂರಪ್ಪ| ಆರೂವರೆ ವರ್ಷ ಸಿಎಂ ಆಗಿದ್ದ ಸಿದ್ದು, ಎಚ್‌ಡಿಕೆ ಹಣ ನೀಡಿಲ್ಲ

ಬೆಂಗಳೂರು[ಮಾ.10]: ರಾಜ್ಯದಲ್ಲಿ ಕಳೆದ ಆರೂವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸರ್ಕಾರಗಳು ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ ಅನುದಾನ ಮೀಸಲಿಡದೇ ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಯೋಜನೆಗೆ ಹಣ ನೀಡುವಂತೆ ಸಲಹೆಗಳನ್ನು ನೀಡುತ್ತಿವೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ, ನಂತರ ಕುಮಾರಸ್ವಾಮಿ ನೇತೃತ್ವದಲ್ಲಿ ಒಂದೂವರೆ ವರ್ಷ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ್ದಾರೆ. ಆದರೆ, ಈ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ಅನುದಾನ ಮೀಸಲಿಡಲಿಲ್ಲ. ಇದೀಗ ಅನುದಾನ ನೀಡುವಂತೆ ಸಲಹೆ ನೀಡುತ್ತಿರುವುದಕ್ಕೆ ಏನೆಂದು ಉತ್ತರಿಸಬೇಕು ಎಂದರು.

10 ಸಾವಿರ ಕೋಟಿ ನಿಗದಿ:

ಕೃಷ್ಣಾ ಮೇಲ್ದಂಡೆಯ ಮೂರನೇ ಹಂತದ ಕಾಮಗಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರಲಿಲ್ಲ. ಆದರೂ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ 10 ಸಾವಿರ ಕೋಟಿ ರು.ಗಳನ್ನು ಮೀಸಲಿಡಲಾಗಿದೆ. ಅಲ್ಲದೆ, ಹಂತ ಹಂತವಾಗಿ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು 20 ಹಳ್ಳಿಗಳನ್ನು ಸ್ಥಳಾಂತರ ಮಾಡಬೇಕಾಗಿದ್ದು, ಇದಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು.

ರಾಜ್ಯದ ರೈತರ ಸರ್ವೋತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ನೀರಾವರಿ ಮತ್ತು ಕೃಷಿಗೆ ಆದ್ಯತೆ ನೀಡಲಾಗಿದೆ. ಅಲ್ಲದೇ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ ಎಂದು ಯಡಿಯೂರಪ್ಪ ವಿವರಿಸಿದರು.

ಇದೇ ವೇಳೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಸರ್ಕಾರ ಕೈಗೊಂಡ ವಿವಿಧ ಪರಿಹಾರಗಳ ಬಗ್ಗೆ ಅಂಕಿ-ಅಂಶಗಳ ಸಹಿತ ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ ಹಾವಳಿ ತಡೆಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ