ನಾಲ್ವರು ಸದಸ್ಯರು ಕಾಂಗ್ರೆಸ್‌ನಿಂದ ಉಚ್ಛಾಟನೆ!

Published : Nov 21, 2019, 08:27 AM ISTUpdated : Nov 21, 2019, 11:59 AM IST
ನಾಲ್ವರು ಸದಸ್ಯರು ಕಾಂಗ್ರೆಸ್‌ನಿಂದ ಉಚ್ಛಾಟನೆ!

ಸಾರಾಂಶ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪ| 4 ಮಂದಿ ಬಿಬಿಎಂಪಿ ಸದಸ್ಯರ ಪಕ್ಷದಿಂದ ಉಚ್ಛಾಟಿಸಿದ ‘ಕೈ’| 

ಬೆಂಗಳೂರು[ನ.21]: ಕೆ.ಆರ್‌. ಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಬಿಬಿಎಂಪಿಯ ಕಾಂಗ್ರೆಸ್‌ ಸದಸ್ಯರಾದ ಜಯಪ್ರಕಾಶ್‌, ಶ್ರೀಕಾಂತ್‌, ಸುರೇಶ್‌, ಎಚ್‌.ಜಿ. ನಾಗರಾಜ್‌ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ರಾಜ್ಯ ಕಾಂಗ್ರೆಸ್‌ ಆದೇಶ ಮಾಡಿದೆ.

ನಾಲ್ಕು ಮಂದಿಯ ಮೇಲೆ ಕೆ.ಆರ್‌. ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಎಂ. ನಾರಾಯಣಸ್ವಾಮಿ ಪರ ಕೆಲಸ ಮಾಡದೆ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಪರ ಕೆಲಸ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿತ್ತು.

'ಪತಿಯೊಂದಿಗೆ ನಾಮಪತ್ರ ಸಲ್ಲಿಸಿದ ಹೇಮಲತಾ, ಇತರ ಮೂವರು ಜೆಡಿಎಸ್‌ನಿಂದ ಉಚ್ಛಾಟನೆ'

ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫೀಉಲ್ಲ, ಬಸವನಪುರ ವಾರ್ಡ್‌ ಸದಸ್ಯ ಜಯಪ್ರಕಾಶ್‌, ದೇವಸಂದ್ರ ವಾರ್ಡ್‌ ಸದಸ್ಯ ಶ್ರೀಕಾಂತ್‌, ಎ.ನಾರಾಯಣಪುರ ವಾರ್ಡ್‌ನ ಸುರೇಶ್‌, ವಿಜ್ಞಾನನಗರ ವಾರ್ಡ್‌ನ ಎಚ್‌.ಜಿ. ನಾಗರಾಜ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ