ಅಂಬರೀಶ್ ಮಗನಿಗೆ ಮಂಡ್ಯ ಟಿಕೆಟ್? ಯಾವ ಪಕ್ಷದಿಂದ!

Published : Jan 07, 2019, 05:46 PM ISTUpdated : Jan 07, 2019, 05:52 PM IST
ಅಂಬರೀಶ್ ಮಗನಿಗೆ ಮಂಡ್ಯ ಟಿಕೆಟ್? ಯಾವ ಪಕ್ಷದಿಂದ!

ಸಾರಾಂಶ

ನಿಗಮ ಮಂಡಳಿ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ತೆಗೆದುಕೊಂಡ ನಿರ್ಧಾರದ ಮೇಲೆ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಎದ್ದಿದ್ದು ಬೆಳಗೆಯಿಂದಲೇ ಸುದ್ದಿಯಾಗುತ್ತಿದೆ. ಇದೇ ಸಂದರ್ಭ ಮಾಜಿ ಸಚಿವ ಎ.ಮಂಜು ನಿವಾಸದಲ್ಲಿ ಸಭೆ  ನಡೆದಿದೆ.

ಬೆಂಗಳೂರು[ಜ.07]  ಕಾಂಗ್ರೆಸ್‌ನಲ್ಲಿ ಅಸಮಾಧಾನ ಎದ್ದಿರುವ ನಡುವೆಯೇ ಮಾಜಿ ಸಚಿವ ಎ.ಮಂಜು ನಿವಾಸದಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದಾರೆ.

ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ, ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ಹುಣಸೂರು ಮಂಜುನಾಥ, ಪಿರಿಯಾಪಟ್ಟಣ ಮಾಜಿ ಶಾಸಕ ವೆಂಕಟೇಶ ಸೇರಿ 10ಕ್ಮೂ ಹೆಚ್ಚು ಮಾಜಿ ಶಾಸಕರು ಭಾಗಿಯಾಗಿದ್ದಾರೆ.

ಜನವರಿ 8 - 9 ರಂದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ದೋಸ್ತಿ ಸರ್ಕಾರದ ನಡೆ, ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರ ಅಬ್ಬರ ಮತ್ತು ದಬ್ಬಾಳಿಕೆ ಹಾಗೂ ಲೋಕಸಭೆ‌ ಚುನಾವಣೆಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಸೇರಿ ಇತರೆ ವಿಚಾರಗಳ ಬಗ್ಗೆ‌ ಚರ್ಚೆ ನಡೆದಿದೆ.

ಸಭೆ ಬಳಿಕ ಮಾತನಾಡಿದ  ಎ.ಮಂಜು, ಎಲ್ಲರ ಮನೆಯಲ್ಲೂ ಒಂದೊಂದು ದಿನ ಊಟ ಮಾಡ್ತೀವಿ. ಕಳೆದ ಬಾರಿ ಮಹದೇವಪ್ಪ ಮನೆಯಲ್ಲಿ ಊಟ ಮಾಡಿದ್ದೇವು. ಈಗ ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದೇವು. ಪಕ್ಷದ ಆಗೋ ಹೋಗುಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.

ಪತ್ನಿಯೊಂದಿಗೆ ಅಂಬಿ ಡ್ಯಾನ್ಸ್..ವಿಡಿಯೋ ವೈರಲ್

ಲೋಕಸಭೆ ಚುನಾವಣಾ ಮೈತ್ರಿ ವಿಚಾರದ ಬಗ್ಗೆಯೂ ಮಂಜು ಮಾತನಾಡಿದ್ದಾರೆ. ಹಾಸನವನ್ನ ಜೆಡಿಎಸ್ ಕೇಳಿದ್ರೆ, ಮಂಡ್ಯವನ್ನ ಕಾಂಗ್ರೆಸ್ಸಿಗೆ ಬಿಟ್ಟು ಕೊಡಬೇಕು. ಅಂಬರೀಷ್ ಅವರ ಪುತ್ರನೇ ನಮ್ಮ ಪಕ್ಷದ ಅಭ್ಯರ್ಥಿಯಾಗಲಿ. ನಮ್ಮ ಪಕ್ಷ ಉಳಿಯೋದು ಬೇಡವಾ ? ಪ್ರಶ್ನೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!