
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಾಹಾರ ಸಭೆ ನಡೆಸಿದ್ದು, ಇಬ್ಬರೂ ಹೈಕಮಾಂಡ್ ಸೂಚನೆಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ, ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಲು ಕಟಿಬದ್ಧವಾಗಿದ್ದು, 2028 ರ ಚುನಾವಣಾ ಕಾರ್ಯತಂತ್ರ ಹಾಗೂ ಡಿಸೆಂಬರ್ 8ರಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದ ವಿಚಾರಗಳನ್ನೂ ಚರ್ಚಿಸಲಾಗಿದೆ. 2028 ರಲ್ಲಿ ಮತ್ತೆ ಸರ್ಕಾರ ರಚಿಸುವ ವಿಶ್ವಾಸವಿದೆ ಹಾಗೂ ಕರ್ನಾಟಕದ ಜನರಿಗೆ ನೀಡಿದ ಪ್ರತಿಯೊಂದು ಭರವಸೆಯನ್ನು ಪೂರೈಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.
ಇದೆಲ್ಲದರ ಮಧ್ಯೆ ಇಬ್ಬರ ನಡುವಿನ ಕದನವಿರಾಮ ಆಗಿದ್ದೇಗೆ ಎಂಬ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ. ಅಧಿಕಾರ ಹಂಚಿಕೆಗೆ ಕದನ ವಿರಾಮಕ್ಕೆ ಐದು ಕಾರಣಗಳ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆಗೆ ಹೈಕಮಾಂಡ್ ಬ್ರೇಕ್ ಹಾಕಲು ಚರ್ಚಿತವಾಗಿರುವ ಐದು ಕಾರಣಗಳನ್ನು ಇಲ್ಲಿ ನೀಡಲಾಗಿದೆ.
ಹೀಗಾಗಿ ಸದ್ಯಕ್ಕೆ ಅಧಿಕಾರ ಹಸ್ತಾಂತರದ ಕದನಕ್ಕೆ ಬ್ರೇಕ್ ಬಿದ್ದಿದೆ ಎನ್ನಲಾಗುತ್ತಿದೆ. ಜೊತೆಗೆ ಈ ಕದನ ವಿರಾಮ ತಾತ್ಕಾಲಿಕ ಎನ್ನಲಾಗುತ್ತಿದ್ದು, ಮತ್ತೆ ಅಧಿಕಾರ ಹಸ್ತಾಂತರದ ಕೂಗು ಮುನ್ನಲೆಗೆ ಬರದೆ ಇರಲಾರದು. ಡಿಸೆಂಬರ್ ಒಳಗಡೆ ಅಥವಾ 2026ರ ಸಂಕ್ರಾಂತಿ ಹಬ್ಬದಲ್ಲಿ ಕ್ರಾಂತಿ ಆಗಲಿದೆ ಎಂದು ಹೇಳಲಾಗುತ್ತಿದೆ. ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.