ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

Published : Dec 27, 2019, 08:21 AM IST
ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

ಸಾರಾಂಶ

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ| ನಿಮ್ಮ ಟೋಪಿ ಬೇರೆಯವರ ಮೇಲೆ ಇರುತ್ತೆ| ಕೆಪಿಸಿಸಿ ಅಧ್ಯಕ್ಷನಾಗಲು ಷರತ್ತು ವಿಧಿಸಿಲ್ಲ| ಅಂತಹ ತಂತ್ರಗಳೆಲ್ಲಾ ಕೆಲಸ ಮಾಡುವುದಿಲ್ಲ

ಬೆಂಗಳೂರು[ಡಿ.27]: ‘ಕಾಂಗ್ರೆಸ್‌ನಲ್ಲಿ ಟೋಪಿ ತೆಗೆಯಲು ನಿರ್ಧರಿಸಿದರೆ ಐದು ನಿಮಿಷದಲ್ಲಿ ತೆಗೆದು ಬಿಡುತ್ತಾರೆ. ಐದೇ ನಿಮಿಷದಲ್ಲಿ ನಿಮ್ಮ ಟೋಪಿ ಬೇರೊಬ್ಬರ ಮೇಲೆ ಇರುತ್ತದೆ’ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್‌ ನೇಮಕ ಮಾಡುವ ಸುದ್ದಿ ಹರಿದಾಡುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ಕಾಂಗ್ರೆಸ್‌ ಹೈಕಮಾಂಡ್‌ಗೆ ಷರತ್ತು ಹಾಕಲು ಆಗುವುದಿಲ್ಲ. ಯಾವುದೇ ಬ್ಲ್ಯಾಕ್‌ಮೇಲ್‌ ತಂತ್ರವೂ ಕೆಲಸ ಮಾಡುವುದಿಲ್ಲ. ಇದು ನನ್ನ ನಾಲ್ಕು ದಶಕಗಳ ಅನುಭವದ ಮಾತು. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಷರತ್ತು ಹಾಕಿದ್ದೇನೆ ಎಂಬುದು ಸುಳ್ಳು. ಕಾಂಗ್ರೆಸ್‌ನಲ್ಲಿ ಒಬ್ಬರ ಟೋಪಿ ಬೇರೊಬ್ಬರ ಮೇಲಿರಲು ಐದು ನಿಮಿಷ ಸಾಕು. ಹೀಗಾಗಿ ಅಧ್ಯಕ್ಷರ ವಿಚಾರ ಏನಾಗುತ್ತದೆ ಎಂಬುದು ನನಗೆ ಗೊತ್ತಿಲ್ಲ. ಏನಾಗುತ್ತದೆ ಎಂಬುದನ್ನು ನೋಡಬೇಕು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನನಗೆ ಗೊತ್ತಿಲ್ಲ. ಡಿ.30 ರೊಳಗಾಗಿ ಆದಾಯ ತೆರಿಗೆ ಇಲಾಖೆಗೆ ನಾನು ಕೆಲವೊಂದು ದಾಖಲೆಗಳನ್ನು ಒದಗಿಸಬೇಕಾಗಿದೆ. ಯಾವಾಗ ಕರೆದರೂ ಬರುವುದಾಗಿ ಐಟಿಯವರಿಗೆ ಮಾತು ಕೊಟ್ಟಿದ್ದೇನೆ. ಹೀಗಾಗಿ ನನ್ನ ಕೆಲಸಗಳಲ್ಲಿ ನಾನು ಕಾರ್ಯನಿರತನಾಗಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆ.ಎಸ್. ಈಶ್ವರಪ್ಪ ಬಿಜೆಪಿ ವಾಪಸಾತಿ, ನನ್ನ ಮನಸ್ಸಲ್ಲೂ ಇದೆ ಬಸನಗೌಡ ಯತ್ನಾಳ್ ಮನಸ್ಸಲ್ಲೂ ಇದೆ ಅಂದ್ರು!
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ