Confusion over Karnataka CM Post: ಸಿಎಂ ಬದಲಾವಣೆಗೆ ಇನ್ನೂ ಡೇಟ್ ಫಿಕ್ಸ್ ಆಗಿಲ್ಲ ಎಂದ ಖರ್ಗೆ

Kannadaprabha News   | Kannada Prabha
Published : May 02, 2026, 04:28 AM IST
Congress leader Mallikarjun kharge regrets his statement that Gujaratis are illiterate

ಸಾರಾಂಶ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳುವ ಮೂಲಕ ಹೊಸ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಬದಲಾವಣೆ ಇಲ್ಲ ಎಂದಿದ್ದ ಅವರು, ಇದೀಗ ಹೈಕಮಾಂಡ್ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ (ಮೇ.2): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ಡೇಟ್‌ ಫಿಕ್ಸ್ ಆಗಿಲ್ಲ. ದಿನಾಂಕವೇ ನಿಗದಿಯಾಗದೆ ಇರುವಾಗ ಮುಖ್ಯಮಂತ್ರಿ ಬದಲಾಗುತ್ತಾರೆ, ಬದಲಾಗಲ್ಲ ಎಂದು ನಾನು ಹೇಗೆ ಹೇಳಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಗುರುವಾರವಷ್ಟೇ ‘ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ’ ಎಂದಿದ್ದ ಖರ್ಗೆಯವರು ಶುಕ್ರವಾರ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡುತ್ತಾ, ‘ಸಿಎಂ ಬದಲಾವಣೆಗೆ ಇನ್ನೂ ಸಮಯ ನಿಗದಿಯಾಗಿಲ್ಲ’ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿ ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ’ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಖರ್ಗೆ, ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇಳಿದರೆ ನಾನೇನು ಹೇಳಲಿ? ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಡೇಟ್‌ ಫಿಕ್ಸ್‌ ಆದ ಮೇಲೆ ನಾವೆಲ್ಲ ಅಂದರೆ, ನಾನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಸೇರಿ ಒಟ್ಟಾಗಿ ಚರ್ಚಿಸಿ, ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.

ಯಾವುದೇ ನಿರ್ಣಯ ಕೈಗೊಂಡರೂ ಅದರ ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದುವರಿಯುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬೆಂಬಲ ನೀಡಬೇಕು. ಈಗಲೇ ಈ ಬಗ್ಗೆ ಯಾವುದೇ ಊಹಾಪೋಹ ಮಾಡಬೇಡಿ. ನಾನೊಂದು ಹೇಳಿದರೆ ನೀವು ಇನ್ನೊಂದನ್ನು ಅರ್ಥೈಸಬೇಡಿ. ಸುಮ್ಮನೆ ತಪ್ಪು ಸಂದೇಶ ನೀಡಬೇಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಮಿಕ್ಷೆ ಲೆಕ್ಕಾಚಾರವನ್ನೇ ಉಲ್ಟಾ ಮಾಡ್ತಾರಾ ವಿಜಯ್? ತಮಿಳುನಾಡಿಗೆ 'ದಳಪತಿ'ಯೇ ಮುಂದಿನ ಮುಖ್ಯಮಂತ್ರಿಯಾ?
ಲವರ್​ ಜೊತೆ ಓಡಿ ಹೋದೋಳು ವೋಟ್​ ಹಾಕಲು ಬಂದು ಸಿಕ್ಕಿಬಿದ್ಲು: 5 ಗಂಟೆ ಕಾದಿದ್ದ ಗಂಡ ಏನ್ಮಾಡಿದ ನೋಡಿ